ಕೇಂದ್ರಿಯ ವಿಹಾರ್ ಅಪಾರ್ಟ್ಮೆಂಟ್ ನಿವಾಸಿಗಳಿಗೆ ಊಟದ ವ್ಯವಸ್ಥೆ

Webdunia
ಸೋಮವಾರ, 22 ನವೆಂಬರ್ 2021 (18:25 IST)
ನಗರದಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ ಕೆಂಪೇಗೌಡ ವಾರ್ಡ್ ವ್ಯಾಪ್ತಿಯ ಯಲಹಂಕ ಕೆರೆ ತುಂಬಿ ಕೇಂದ್ರೀಯ ವಿಹಾರ ಅಪಾರ್ಟ್ ಮೆಂಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ಜಲಾವೃತಗೊಂಡಿವೆ. ಸ್ಥಳಕ್ಕೆ ಸ್ಥಳೀಯ ಶಾಸಕ ಎಸ್.ಆರ್. ವಿಶ್ವನಾಥ್, ಮುಖ್ಯ ಆಯುಕ್ತ ಗೌರವ್ ಗುಪ್ತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ರಾತ್ರಿ ಎರಡು ಗಂಟೆ ಸಮಯದಲ್ಲಿ 130 ಮಿ.ಮೀಗೂ ಹೆಚ್ಚು ಮಳೆಯಾದ ಪರಿಣಾಮ ಯಲಹಂಕ ಕೆರೆ ತುಂಬಿ ಕೆರೆಯ ಕೋಡಿ ಬಿದ್ದು, ರಾಜಕಾಲುವೆಯಲ್ಲಿ ನೀರಿನ ಪ್ರಮಾಣ ಹೆಚ್ಚಾದ ಪರಿಣಾಮ ಕೇಂದ್ರೀಯ ವಿಹಾರ ಅಪಾರ್ಟ್ ಮೆಂಟ್ ನ ಸುಮಾರು 4 ಅಡಿಯಷ್ಟು ನೀರು ನಿಂತು ಜಲಾವೃತಗೊಂಡಿದೆ. ಅಪಾರ್ಟ್ ಮೆಂಟ್ ನಲ್ಲಿ 604 ಪ್ಲಾಟ್ ಗಳಿದ್ದು, 1,600 ನಿವಾಸಿಗಳು ವಾಸಿಸುದ್ದಾರೆ. ಮೆನೆಯಲ್ಲಿರುವವರಿಗೆ ಹಾಲು, ಬಿಸ್ಕೆಟ್, ಕ್ಯಾಂಡಲ್, ಬ್ರೆಡ್, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ. 18 ಎನ್.ಡಿ.ಆರ್.ಎಫ್ ತಂಡಗಳು ಹಾಗೂ ಅಗ್ನಿ ಶಾಮಕ ತಂಡಗಳು ದೋಣಿಗಳು ಹಾಗೂ ಟ್ರ್ಯಾಕ್ಟರ್ ಮೂಲಕ ನಿವಾಸಿಗಳನ್ನು ಮನೆಯಿಂದ ಹೊರಗೆ ಕರೆತರುವ ಹಾಗೂ ಒಳಗೆ ಕರೆದೊಯ್ಯುವ ಕೆಲಸ ಮಾಡುತ್ತಿದ್ದಾರೆ. ಯಾರಿಗೂ ಯಾವುದೇ ಸಮಸ್ಯೆ ಆಗುರಿವುದಿಲ್ಲ. ಪಾಲಿಕೆಯ ಕಂದಾಯ ಅಧಿಕಾರಿಗಳ ತಂಡವು ನಿವಾಸಿಗಳ ಮನೆಗೆ ತೆರಳಿ ಏನೇನು ಸಮಸ್ಯೆಯಾಗಿದೆ ಎಂಬ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಲ್ಲಿಕಾರ್ಜುನ ಖರ್ಗೆ ಜೊತೆ ಸೋನಿಯಾ ಗಾಂಧಿ ಮೀಟಿಂಗ್: ಮೇಡಂ ಕೈಯಲ್ಲಿ ಎಲ್ಲಾ ಇದೆ

ಸಿಎಂ ಜೊತೆ ಭಿನ್ನಾಭಿಪ್ರಾಯ ಇಲ್ಲ ಎಂದ ಡಿಕೆ ಶಿವಕುಮಾರ್: ಆದರೆ ಕತೆ ಬೇರೆಯೇ ಇದೆ..

ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ: ವಿಪಕ್ಷಗಳಿಗೆ ಸಿಕ್ಕಿದೆ ಎರಡು ಅಸ್ತ್ರ

Karnataka Weather: ಬೆಂಗಳೂರು ಚಳಿಗೆ ಗಡ, ಗಡ: ಈ ವಾರದ ಹವಾಮಾನ ತಪ್ಪದೇ ಗಮನಿಸಿ

ಸಿಎಂ ಕುರ್ಚಿಗಾಗಿ ಗುದ್ದಾಟದ ನಡುವೆ ಆ ಸ್ಥಾನ ಬೇಕಾಗಿಲ್ಲವೆಂದ ಸಂತೋಷ್ ಲಾಡ್‌

ಮುಂದಿನ ಸುದ್ದಿ
Show comments