Webdunia - Bharat's app for daily news and videos

Install App

ಮತದಾರರ ಪಟ್ಟಿ ಪರಿಷ್ಕರಣೆ-2023 ಅಂಗವಾಗಿ ಕಾಲ್ನಡಿಗೆ ಜಾಥಾ

Webdunia
ಬುಧವಾರ, 9 ನವೆಂಬರ್ 2022 (15:04 IST)
bbmp
ಮತದಾರರ ಪಟ್ಟಿ ಪರಿಷ್ಕರಣೆ-2023 ಭಾಗವಾಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 7.00ಕ್ಕೆ ಹಡ್ಸನ್ ವೃತ್ತ, ಕಬ್ಬನ್ ಉದ್ಯಾನದ ಮುಖ್ಯ ದ್ವಾರದಿಂದ ಕಾಲ್ನಡಿಗೆ ಜಾಥ ಹಮ್ಮಿಕೊಂಡಿದ್ದು,  ಕಾರ್ಯಕ್ರಮಕ್ಕೆ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ, ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಚಾಲನೆ ನೀಡಿದರು.
 
ಕಾಲ್ನಡಿಗೆ ಜಾಥವು ಹಡ್ಸನ್ ವೃತ್ತ, ಕಬ್ಬನ್ ಉದ್ಯಾನದ ಮುಖ್ಯ ದ್ವಾರದಿಂದ, ಸೆಂಟ್ರಲ್ ಲೈಬ್ರರಿ, ಉಚ್ಛ ನ್ಯಾಯಾಲಯ, ವಿಧಾನಸೌಧ ರಸ್ತೆ, ಪ್ರೆಸ್ ಕ್ಲಬ್, ಕಬ್ಬನ್ ಉದ್ಯಾನದ ಮೂಲಕ ಬಾಲಭವನದವರೆಗೆ ನಡೆಯಿತು. ಸದರಿ ಜಾಥ ಕಾರ್ಯಕ್ರಮದಲ್ಲಿ ಬಿಬಿಎಂಪಿ ಕಛೇರಿ ಸಿಬ್ಬಂದಿ, ಮುಖ್ಯ ಚುನಾವಣಾಧಿಕಾರಿ ಸಿಬ್ಬಂದಿ, ಚುನಾವಣಾ ಸಾಕ್ಷರತಾ ಸಂಘ, ಎನ್.ಸಿ.ಸಿ, ಎನ್.ಎಸ್.ಎಸ್ ವಿದ್ಯಾರ್ಥಿಗಳು, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಸೇರಿದಂತೆ 1000ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು.
 
ಈ ವೇಳೆ ವಿಶೇಷ ಆಯುಕ್ತರಾದ ಎಸ್.ರಂಗಪ್ಪ, ಡಾ. ತ್ರಿಲೋಕ್ ಚಂದ್ರ, ಅಪರ ಮುಖ್ಯ ಚುನಾವಣಾಧಿಕಾರಿ ವೆಂಕಟೇಶ್, ಉಪ ಆಯುಕ್ತರಾದ ಮುರಳೀಧರ್, ಸಹಾಯ ಆಯುಕ್ತರಾದ ಉಮೇಶ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Modi: ಮೋದಿ ಎಲ್ಲಿ ಪ್ರಚಾರ ಸಿಗುತ್ತೋ ಅಲ್ಲಿ ಮಾತ್ರ ಹೋಗ್ತಾರಾ: ಪ್ರಲ್ಹಾದ್ ಜೋಶಿ ಏನು ಹೇಳಿದ್ರು

ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ, ಬಿಜೆಪಿ ಅಧಿಕಾರ ಹಿಡಿಯುತ್ತೆ: ವಿಶ್ವೇಶ್ವರ ಹೆಗಡೆ ಕಾಗೇರಿ

Pralhad Joshi: ಭಾರತ ಈಗ ಜಗತ್ತಿಗೆ ನಂ 4, ಸದ್ಯದಲ್ಲೇ ನಂ 3 ಆಗ್ತೀವಿ: ಪ್ರಲ್ಹಾದ್ ಜೋಶಿ

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಒಂದು ಉಗ್ರ ಹೋರಾಟ

Priyank Kharge: ನಿಮ್ಮ ಮಕ್ಳು ಮಾತ್ರ ಕೊಹ್ಲಿ ಜೊತೆ ಫೋಟೋ ತೆಗೆಸಿಕೊಳ್ಬೇಕಾ: ಪ್ರಿಯಾಂಕ್ ಖರ್ಗೆಗ ನೆಟ್ಟಿಗರು ಟಾಂಗ್

ಮುಂದಿನ ಸುದ್ದಿ
Show comments