Publish Date: Thu, 09 Jul 2026 (16:00 IST)
Updated Date: Thu, 09 Jul 2026 (16:03 IST)
ಬೆಂಗಳೂರು: ಫುಟ್ಪಾತ್ ತೆರವು ಕಾರ್ಯಚರಣೆ ನಿಲ್ಲುವುದಿಲ್ಲ, ಮುಂದುವರೆಸುವುದಾಗಿ ಹೇಳುವ ಮೂಲಕ ಬೀದಿಬದಿ ವ್ಯಾಪಾರಿಗಳಿಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರು ಮತ್ತೆ ಶಾಕ್ ನೀಡಿದ್ದಾರೆ.
ಮತ್ತೊಂದು ಕಡೆ ಬೆಂಗ ಳೂರಿನ ಹಲವು ಕಡೆ ತೆರವು ಕಾರ್ಯಾಚರಣೆ ಮುಂದುವರಿದಿದ್ದು, ವ್ಯಾಪಾರಿಗಳು ಆಕ್ರೋಶ ಹೊರ ಹಾಕಿದ್ದಾರೆ. ಇನ್ನೂ ಇದರ ವಿರುದ್ಧ ಹೋರಾಟಕ್ಕೆ ಬೀಬಿಬಂದಿ ವ್ಯಾಪಾರ ಸಮಿತಿ ಸಜ್ಜಾಗಿದೆ.
ಕಳೆದ 8 ದಿನಗಳಿಂದ ಬೆಂಗಳೂರಿನಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಾ ಇದೆ. ಸುಮಾರು 430 ಕಿಮೀ ಫುಟ್ಪಾತ್ ತೆರವು ಆಗಿದೆ. ಇನ್ನೂ ಫುಟ್ಪಾತ್ ತೆರವಿಗೆ ಭಾರೀ ವಿರೋಧ ವ್ಯಕ್ತವಾಗಿದ್ದು, ಇದೀಗ ಬೀದಿಬದಿ ವ್ಯಾಪಾರಿಗಳ ಜತೆ ಸಚಿವ ಕೃಷ್ಣ ಬೈರೇಗೌಡ ಅವರು ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಬೀದಿಬದಿ ವ್ಯಾಪಾರಿಗಳ ಕೆಲವೊಂದು ಬೇಡಿಕೆಗಳನ್ನ ಈಡೇರಿಸುವುದರ ಬಗ್ಗೆ ಚರ್ಚೆ ಆಗಿದೆ. ಆದರೆ ಯಾವುದೇ ಕಾರಣಕ್ಕೂ ಫುಟ್ಪಾತ್ ತೆರವು ಕಾರ್ಯಾಚರಣೆ ಸ್ಥಗಿತ ಆಗಲ್ಲ, ಮುಂದುವರಿಯುತ್ತದೆ ಎಂದು ಸಚಿವರು ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ನಿರ್ದೇಶನದ ಪ್ರಕಾರವೇ ತೆರವು ಕಾರ್ಯಾಚರಣೆ ಆಗ್ತಿದೆ. 18 ಸಾವಿರ ರಸ್ತೆಗಳಲ್ಲಿ ಬರೀ ಒಂದೂವರೆ ಸಾವಿರ ರಸ್ತೆಗಳಲ್ಲಿ ಮಾತ್ರ ತೆರವು ಮಾಡ್ತಾ ಇದ್ದೇವೆ ಎಂದು ಹೇಳಿದರು.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ