Select Your Language

Notifications

webdunia
webdunia
webdunia
webdunia

ಬೆಂಗಳೂರು ನಗರ ಉಳಿಯಲು ಕಾಂಗ್ರೆಸ್‌ಗೆ ಬೆಂಬಲ: ಕುಮಾರಸ್ವಾಮಿ

ಬೆಂಗಳೂರು ನಗರ ಉಳಿಯಲು ಕಾಂಗ್ರೆಸ್‌ಗೆ ಬೆಂಬಲ: ಕುಮಾರಸ್ವಾಮಿ
ಬೆಂಗಳೂರು , ಸೋಮವಾರ, 31 ಆಗಸ್ಟ್ 2015 (21:09 IST)
ಬೆಂಗಳೂರು ನಗರ ಉಳಿಯಬೇಕು ಎನ್ನುವ ಚಿಂತನೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಲಾಗುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
 
ಬಿಜೆಪಿ ಅಧಿಕಾರವಧಿಯಲ್ಲಿ ಬೆಂಗಳೂರನ್ನು ಹಾಳುಗೆಡುವಿದೆ. ನಗರ 10 ವರ್ಷಗಳಷ್ಟು ಹಿಂದಕ್ಕೆ ಹೋಗಿದೆ. ನಗರಕ್ಕಾದ ಅನಾಹುತ ತಡೆಯಲು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
 
ಬಿಜೆಪಿ ಪಕ್ಷಕ್ಕೆ ತಾಕತ್ತಿದ್ರೆ ಬಹಿರಂಗ ಚರ್ಚೆಗೆ ಬರಲಿ. ಅಧಿಕಾರದಲ್ಲಿದ್ದಾಗ ಬಿಬಿಎಂಪಿಯನ್ನು ಹಾಳುಗೆಡುವಿದ್ದಲ್ಲದೇ 9 ಸಾವಿರ ಕೋಟಿ ರೂಪಾಯಿ ಸಾಲ ಮಾಡಿ ದಿವಾಳಿ ಎಬ್ಬಿಸಿದೆ ಎಂದು ವಾಗ್ದಾಳಿ ನಡೆಸಿದರು.
 
ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರೊಂದಿಗೆ ಚರ್ಚೆ ನಡೆಸಿಲ್ಲ. ಒಂದು ವೇಳೆ ಸಿದ್ದರಾಮಯ್ಯ ಮಾಹಿತಿ ಕೇಳಿದಲ್ಲಿ ಜೆಡಿಎಸ್ ಪಕ್ಷದ ನಿರ್ಣಯ ತಿಳಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.  

Share this Story:

Follow Webdunia kannada