Select Your Language

Notifications

webdunia
webdunia
webdunia
webdunia

ಕಾವೇರಿ ನೀರಿಗಾಗಿ ಜೀವ ಕೊಡಲು ಸಿದ್ದ: ಶಿವಣ್ಣ ಘೋಷಣೆ

ಕಾವೇರಿ ನೀರಿಗಾಗಿ ಜೀವ ಕೊಡಲು ಸಿದ್ದ: ಶಿವಣ್ಣ ಘೋಷಣೆ
ಬೆಂಗಳೂರು , ಬುಧವಾರ, 7 ಸೆಪ್ಟಂಬರ್ 2016 (19:13 IST)
ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಪ್ರತಿಭಟಿಸುತ್ತಿರುವ ಪ್ರತಿಭಟನಾಕಾರರಿಗೆ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಬೆಂಬಲ ಸೂಚಿಸಿದ್ದಾರೆ. 
 
ಕಾವೇರಿ ನೀರು ಹೋರಾಟಕ್ಕಾಗಿ ಸದಾ ಬದ್ಧವಾಗಿದ್ದೇನೆ. ಮಂಡ್ಯ ಜಿಲ್ಲೆಗೆ ನಾನೇ ಬಂದು ನಿಮ್ಮೊಂದಿಗೆ ಹೋರಾಟದಲ್ಲಿ ಪಾಲ್ಗೊಳ್ಳುತ್ತೇನೆ. ಕಾವೇರಿಗಾಗಿ ಜೀವ ಕೊಡಲು ಸಿದ್ದ ಎಂದು ಘೋಷಿಸಿದ್ದಾರೆ.
 
ಕೇವಲ ರಾಜಕೀಯ ಕಾರಣಗಳಿಂದಾಗಿ ಉಭಯ ರಾಜ್ಯಗಳ ಕಾವೇರಿ ಸಮಸ್ಯೆ ಜೀವಂತವಾಗಿ ಉಳಿದಿದೆ ಎಂದು ಅಭಿಪ್ರಾಯಪಟ್ಟ ಅವರು, ಕಾವೇರಿ ಕಣಿವೆಯ ರೈತರು ಯಾವುದೇ ಕಾರಣಕ್ಕೂ ಧೃತಿಗೆಡಬೇಕಾಗಿಲ್ಲ. ನಾವೆಲ್ಲರೂ ನಿಮ್ಮೊಂದಿಗಿದ್ದೇವೆ ಎಂದು ಭರವಸೆ ನೀಡಿದ್ದಾರೆ.
 
ಉಭಯ ರಾಜ್ಯಗಳು ಸಹೋದರತೆ ಸಮನ್ವಯತೆಯಿಂದ ಸಮಸ್ಯೆಯನ್ನು ಪರಿಹರಿಸಿಕೊಳ್ಳಬೇಕಾಗಿದೆ. ಪ್ರಧಾನಿ ಮೋದಿ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ಮಧ್ಯವಿರುವ ಕಾವೇರಿ ಸಮಸ್ಯೆಯನ್ನು ಪರಿಹರಿಸಲು ಮಧ್ಯಸ್ಥಿಕೆ ವಹಿಸಬೇಕು ಎಂದು ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಮನವಿ ಮಾಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಕಾವೇರಿ ಹೋರಾಟಕ್ಕೆ ಚಿತ್ರರಂಗ ಸದಾ ಬದ್ಧ : ಸುದೀಪ್ ಟ್ವೀಟ್