ಕಳಸಾ ಬಂಡೂರಿ ಯೋಜನೆ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜಕೀಯ ತೆವಲಿಗಾಗಿ ಜಗದೀಶ್ ಶೆಟ್ಟರ್, ಪ್ರಹ್ಲಾದ್ ಜೋಷಿ ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಕಳಸಾ ಬಂಡೂರಿ ಯೋಜನೆ ವಿಚಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಮುಖಂಡ ಕುಮಾರಸ್ವಾಮಿ, ಬಿಜೆಪಿ ನಾಯಕರು ಕೇವಲ ಭರವಸೆಗಳನ್ನು ಮಾತ್ರ ನೀಡುತ್ತಾರೆ. ಆದರೆ, ಭರವಸೆಗಳನ್ನು ಜಾರಿಗೊಳಿಸುವ ಬಗ್ಗೆ ಚಕಾರವೆತ್ತುವುದಿಲ್ಲ ಎಂದು ಲೇವಡಿ ಮಾಡಿದರು.
ಬಿಜೆಪಿ ನಾಯಕರಿಂದ ನನ್ನ ಮತ್ತು ದೇವೇಗೌಡರ ವಿರುದ್ಧ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಅವರಿಗೆ ತಾಕತ್ತಿದ್ರೆ ಹುಬ್ಬಳ್ಳಿಯಲ್ಲಿ ಬಹಿರಂಗ ಚರ್ಚೆಗೆ ಬರಲಿ ಎಂದು ಸವಾಲ್ ಹಾಕಿದರು.