ರೀಲ್ಸ್‌ಗಾಗಿ, 20 ಅಡಿ ಎತ್ತರದಿಂದ ತುಂಗಭದ್ರಾ ನದಿಗೆ ಜಿಗಿದ ವೈದ್ಯೆ, ಮುಂದೇ ಆಗಿದ್ದು ದೊಡ್ಡ ಅನಾಹುತ

Sampriya
ಬುಧವಾರ, 19 ಫೆಬ್ರವರಿ 2025 (17:35 IST)
Photo Courtesy X
ಕೊಪ್ಪಳ: ರೀಲ್ಸ್‌ಗಾಗಿ ಇಲ್ಲಿನ ತುಂಗಭದ್ರಾ ನದಿಗೆ 20 ಅಡಿ ಎತ್ತರದಿಂದ ಜಿಗಿದ ವೈದ್ಯೆಯೊಬ್ಬರು ಈಜಲು ಸಾಧ್ಯವಾಗದೆ ನೀರುಪಾಲಾದ ಘಟನೆ ನಡೆದಿದೆ.

ಸ್ನೇಹಿತರ ಜೊತೆ ಈಜಲು ಹೋಗಿದ್ದ ವೈದ್ಯೆಯೊಬ್ಬಳು 20 ಅಡಿ ಎತ್ತರದಿಂದ ತುಂಗಭದ್ರಾ ನದಿಗೆ ಜಿಗಿದಿದ್ದಾಳೆ.  ಆದರೆ ಈಜಲು ಸಾಧ್ಯವಾಗದೆ ನೀರಿನ ಸೆಳೆತಕ್ಕೆ ಸಿಲುಕಿ ನೀರುಪಾಲಾಗಿದ್ದಾರೆ.

ಹೈದರಾಬಾದ್ ಮೂಲದ 26 ವರ್ಷದ ಅನನ್ಯರಾವ್​ ಜಿಗಿದಿದ್ದಳು. ಆದರೆ ನೀರಿನ ಹರಿವು ಹೆಚ್ಚಾಗಿದ್ದರಿಂದ ಈಜಲು ಸಾಧ್ಯವಾಗದೇ ಮುಳುಗಿದ್ದಾಳೆ. ಹೈದರಬಾದ್​ ಖಾಸಗಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅನನ್ಯರಾವ್​, ನಿನ್ನೆ ಮೂವರು ಸ್ನೇಹಿತರ ಜತೆ ಪ್ರವಾಸಕ್ಕೆ ಬಂದಿದ್ದು, ಇಂದು ಬೆಳಗ್ಗೆ ನದಿಗೆ ಈಜಲು ತೆರಳಿದ್ದರು.

ಇನ್ನು ರೀಲ್ಸ್‌ಗಾಗಿ ವಿಡಿಯೋ ಮಾಡಲು ಹೋದಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.  ಹೌದು ದೂರದಲ್ಲಿ ನಿಂತಿದ್ದ ವ್ಯಕ್ತಿಯೋರ್ವ ಒಂದು, ಎರಡು, ಮೂರು ಜಂಪ್ ಎಂದು ಹೇಳಿದ ತಕ್ಷಣ ಅನನ್ಯರಾವ್ ನದಿಗೆ ಜಿಗಿದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಇನ್ನು ಸ್ಥಳಕ್ಕೆ ಗಂಗಾವತಿ ಗ್ರಾಮೀಣ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿದ್ದು, ವೈದ್ಯೆಗಾಗಿ ಶೋಧ ಕಾರ್ಯ ನಡೆಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೀನ್ಸ್ ಪಾರ್ಕ್ ಎಲ್ಲಪ್ಪ: ರಾಹುಲ್ ಗಾಂಧಿಗೆ ಪ್ರಶ್ನಿಸಿದ ಆರ್ ಅಶೋಕ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ನಿತೀಶ್ ಕುಮಾರ್ ಇಂದು 10 ನೇ ಬಾರಿಗೆ ಸಿಎಂ ಆಗಿ ಪ್ರಮಾಣ ವಚನ: ಯಾರೆಲ್ಲಾ ಭಾಗಿಯಾಗಲಿದ್ದಾರೆ

ಬಿಜೆಪಿ, RSS ದಲಿತರು ಯಾಕೆ ಸೇರ್ತಾರೋ ಸಿದ್ದರಾಮಯ್ಯ: ಜಾತಿ ಮಾತನಾಡುವುದನ್ನು ನಿಲ್ಲಿಸಿ ಎಂದ ನೆಟ್ಟಿಗರು

ಬೆಂಗಳೂರು 7 ಕೋಟಿ ರೂ ದರೋಡೆಗೆ ವೆಬ್ ಸೀರೀಸ್ ಸ್ಪೂರ್ತಿ: ಶಾಕಿಂಗ್ ವಿಚಾರಗಳು ಬಹಿರಂಗ

ಮುಂದಿನ ಸುದ್ದಿ
Show comments