Webdunia - Bharat's app for daily news and videos

Install App

ನೆಲ, ಜಲ, ಭಾಷೆಗೆ ಧಕ್ಕೆ ಬಂದಾಗ ಸರಕಾರಕ್ಕೆ ಬೆಂಬಲ: ಅನಂತ್ ಕುಮಾರ್

Webdunia
ಶನಿವಾರ, 27 ಆಗಸ್ಟ್ 2016 (18:22 IST)
ನೆಲ, ಜಲ, ಭಾಷೆಗೆ ಧಕ್ಕೆ ಉಂಟಾಗುವ ಸಂದರ್ಭ ಬಂದರೆ ಪಕ್ಷ ಬೇಧ ಮರೆತು ಎಲ್ಲಾ ರಾಜಕೀಯ ಪಕ್ಷಗಳು ಒಗ್ಗಟ್ಟಾಗಿ ಸರಕಾರವನ್ನು ಬೆಂಬಲಿಸುತ್ತೇವೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೇಳಿದರು. 
 
ಕಾವೇರಿ ನದಿಯಿಂದ ನೀರು ಬಿಡುವಂತೆ ತಮಿಳುನಾಡು ಸರಕಾರದ ಒತ್ತಡ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆಯಿತು.
 
ಸರ್ಪ ಪಕ್ಷಗಳ ಸಭೆ ಬಳಿಕೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ಜಲಾನಯನ ಪ್ರದೇಶಗಳಲ್ಲಿ ನೀರಿಗೆ ತೀವ್ರ ಸಂಕಷ್ಟವುಂಟಾಗಿದೆ. ಇಂತಹ ಪರಿಸ್ಥಿತಿಯ ಕುರಿತು ನಾವು ಸುಪ್ರೀಂ ಕೋರ್ಟ್‌ಗೆ ಮನವರಿಕೆ ಮಾಡಿಕೊಡಬೇಕು. ಈ ಕೆಲಸವನ್ನು ರಾಜ್ಯ ಸರಕಾರ ಮಾಡಬೇಕು ಎಂದರು.
 
ಈಗಾಗಲೇ ಕಾವೇರಿ ಜಲಾನಯನ ಪ್ರದೇಶದಲ್ಲಿ ಬಿತ್ತನೆ ಕಾರ್ಯಗಳು ಮುಗಿಯಬೇಕಿತ್ತು. ಆದರೆ, ಮಳೆ ಕೊರತೆಯಿಂದ ಬಹುತೇಕ ಪ್ರದೇಶದ ಭೂಮಿಯಲ್ಲಿ ಬಿತ್ತನೆಯಾಗದೆ ಹಾಗೇ ಉಳಿದಿದೆ. ರಾಜ್ಯದಲ್ಲಿ ಇನ್ನೂ ಕೆಲ ಕಾಲ ಮಳೆಯಾಗದಿದ್ದರೆ ಪರಿಸ್ಥಿತಿ ತುಂಬಾ ಬಿಗಡಾಯಿಸುತ್ತದೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಎಚ್ಚರಿಸಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments