Webdunia - Bharat's app for daily news and videos

Install App

ಆ ಕಾರಣಕ್ಕೆ ನಾದಿನಿಯ ಮುಖಕ್ಕೆ ಆ್ಯಸಿಡ್ ಎರಚಿದ ಭಾವ

Webdunia
ಶುಕ್ರವಾರ, 24 ಜನವರಿ 2020 (21:09 IST)
ನಾದಿನಿ ಮುಖಕ್ಕೆ ಭಾವನೇ ಆ್ಯಸಿಡ್ ಎರಚಿರೋ ಅಮಾನವೀಯ ಘಟನೆ ನಡೆದಿದೆ.

ಮಂಗಳೂರಿನ ಕಡಬ ಠಾಣಾ ವ್ಯಾಪ್ತಿಯ ಕೋಡಿಂಬಾಳದಲ್ಲಿ ಘಟನೆ ನಡೆದಿದ್ದು, ಆರೋಪಿಯನ್ನು ಪೋಲೀಸರು ವಶಕ್ಕೆ 
ಪಡೆದಿದ್ದಾರೆ.

ಆ್ಯಸಿಡ್ ಎರಚಿದ ಆರೋಪಿಯನ್ನು ಕೊಂಡಿಂಬಾಳ ಗ್ರಾಮದ ಕೊಠಾರಿ ನಿವಾಸಿ ಜಯಾನಂದ ಕೊಠಾರಿ(55) ಎಂದು ಗುರುತಿಸಲಾಗಿದೆ. ಇವರ ವೃತ್ತಿಯಲ್ಲಿ ಎಲ್‍ಐಸಿ ಏಜೆಂಟ್ ಆಗಿದ್ದು ಕೃಷಿಕರಾಗಿದ್ದಾನೆ. ಈತ ತನ್ನ ತಮ್ಮನ ಪತ್ನಿ ವಿಧವೆ ಮಹಿಳೆ ಸ್ವಪ್ನಾ(35) ಎಂಬುವರ ಮುಖಕ್ಕೆ ರಬ್ಬರ್ ಶೀಟ್ ಮಾಡಲು ಬಳಸುವ ಆ್ಯಸಿಡ್ ಎಸೆದಿದ್ದಾರೆ.

ಈ ಸಂದರ್ಭದಲ್ಲಿ ಮಹಿಳೆಯ ಹತ್ತಿರವಿದ್ದ ತನ್ನ ಹೆಣ್ಣು ಮಗಳಿಗೂ ಆ್ಯಸಿಡ್ ತಾಗಿದ್ದು, ತಾಯಿ ಹಾಗೂ ಮಗು ಇಬ್ಬರನ್ನೂ ಪುತ್ತೂರು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ವಪ್ನಾ ಅವರ ಪತಿ ರವಿ ಅವರು ಈಗಾಗಲೇ ಮೃತಪಟ್ಟಿದ್ದು , ಪ್ರತ್ಯೇಕವಾಗಿ ತನ್ನ ಮೂರು ಹೆಣ್ಣು ಮಕ್ಕಳೊಂದಿಗೆ ವಾಸವಾಗಿದ್ದಾರೆ. ಜಯಾನಂದ ಹಾಗೂ ಸ್ವಪ್ನಾ ಅವರ ಮಧ್ಯೆ ಹಣಕಾಸಿನ ವಿಚಾರದಲ್ಲಿ ಮನಸ್ತಾಪವಿದೆ. ಅದು ಭೂವಿವಾದಕ್ಕೆ ತಿರುಗಿ ಇವರ ಮಧ್ಯೆ ಜಗಳ ನಡೆಯುತ್ತಿತ್ತು. ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರೂ ಪ್ರಕರಣ ಜೀವಂತವಾಗಿತ್ತು. ಮತ್ತೆ ವಿವಾದ ಭುಗಿಲೆದ್ದು ಸಂಜೆ ಆ್ಯಸಿಡ್ ಎರಚಿದ ಪ್ರಕರಣ ನಡೆದಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

Indore Couple murder: ಮದುವೆ ಇಷ್ಟ ಇಲ್ಲ ಅಂದ್ರೆ ಆಗ್ಬೇಡಿ, ಮರ್ಡರ್ ಯಾಕೆ ಮಾಡ್ತೀರಿ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

ಮುಂದಿನ ಸುದ್ದಿ
Show comments