ಕೃಷಿಕರನ್ನು ಮದುವೆಯಾಗುವವರಿಗೆ ಆನಗೋಡು ಗ್ರಾಮದ ಸೇವಾ ಸಹಕಾರ ಸಂಘದಿಂದ ಬಂಪರ್ ಆಫರ್

Webdunia
ಗುರುವಾರ, 31 ಜನವರಿ 2019 (15:42 IST)
ಕಾರವಾರ : ರೈತಾಪಿ ಯುವಕನನ್ನು ಮದುವೆಯಾಗುವವರಿಗೆ ಆನಗೋಡು ಗ್ರಾಮದ ಸೇವಾ ಸಹಕಾರ ಸಂಘ ಬಂಪರ್ ಆಫರ್ ವೊಂದನ್ನು ಘೋಷಣೆ ಮಾಡಿದೆ.


ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದೊಂದು ದಶಕದಿಂದ ರೈತಾಪಿ ಯುವಕರಿಗೆ ಮದುವೆನೇ ಆಗುತ್ತಿಲ್ಲ. ಕೃಷಿಕರಿಗೆ ಹೆಣ್ಣುಕೊಡಲು ಯಾರು ಮುಂದೆ ಬರುತ್ತಿಲ್ಲ. ಯಲ್ಲಾಪುರ ತಾಲೂಕಿನ ಆನಗೋಡು ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಈ ಸಮಸ್ಯೆ ಹೆಚ್ಚಾಗಿದ್ದು, 30ಕ್ಕೂ ಹೆಚ್ಚು ಜನ ಯುವಕರು ಇನ್ನೂ ಬ್ರಹ್ಮಚಾರಿಗಳಾಗಿಯೇ ಉಳಿದುಕೊಂಡಿದ್ದಾರೆ.


ಈ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಆನಗೋಡು ಗ್ರಾಮದ ಸೇವಾ ಸಹಕಾರ ಸಂಘ ತಮ್ಮ ಸಂಘದ ರೈತರ ಮಕ್ಕಳಿಗೆ ಯಾರು ಹೆಣ್ಣು ಕೊಡುತ್ತಾರೋ ಅವರ ಹೆಸರಲ್ಲಿ ಉಚಿತವಾಗಿ ಒಂದು ಲಕ್ಷ ರೂಪಾಯಿ ಠೇವಣಿ ಇಡಲು ನಿರ್ಧರಿಸಿದೆ ಎಂದು ಘೋಷಣೆ ಮಾಡಿದೆ.


ಈಗಾಗಲೇ ಎಲ್ಲಾ ಸದಸ್ಯರ ಬೆಂಬಲ ಪಡೆದು ರೈತರ ಕಲ್ಯಾಣ ಯೋಜನೆ ಜಾರಿಗೆ ತರಲು ಸಂಬಂಧಪಟ್ಟ ಇಲಾಖೆಯ ಅನುಮೋದನೆಗಾಗಿ ಕಳುಹಿಸಲಾಗಿದೆ. ಇದಕ್ಕೆ ಬಹುತೇಕ ಅಂಕಿತ ಬೀಳುವ ಸಾಧ್ಯತೆ ಇದ್ದು, ಏಪ್ರಿಲ್ 1ರಿಂದ ಜಾರಿಗೆ ಬರುವ ಸಾಧ್ಯತೆಗಳಿವೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments