Webdunia - Bharat's app for daily news and videos

Install App

ಯಾವುದೇ ಕಾರಣಕ್ಕೂ ಇನ್ನೊಮ್ಮೆ ಕಾಂಗ್ರೆಸ್​ ಕಡೆ ತಿರುಗಿಯೂ ನೋಡುವುದಿಲ್ಲ- ಬಿ.ಸಿ. ಪಾಟೀಲ್

Webdunia
ಭಾನುವಾರ, 4 ಆಗಸ್ಟ್ 2019 (11:46 IST)
ಬೆಂಗಳೂರು : ಯಾವುದೇ ಕಾರಣಕ್ಕೂ ಇನ್ನೊಮ್ಮೆ ಕಾಂಗ್ರೆಸ್​ ಕಡೆ ತಿರುಗಿಯೂ ನೋಡುವುದಿಲ್ಲ. ಕಾಂಗ್ರೆಸ್​ ಸೇರುವುದು ಕನಸಿನ ಮಾತು ಎಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅನರ್ಹಗೊಂಡಿದ್ದ ಹಿರೇಕೆರೂರು ಶಾಸಕ ಬಿ.ಸಿ. ಪಾಟೀಲ್ ಹೇಳಿದ್ದಾರೆ.




ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭಾ ಉಪ ಚುನಾವಣೆ ಬಗ್ಗೆ ಕಾಂಗ್ರೆಸ್ ಏನು ಮಾಡುತ್ತಿದೆ ಎಂದು ನಮಗೆ ಗೊತ್ತು. ನಾವು ಅಭಿವೃದ್ಧಿ ದೃಷ್ಟಿಯಿಂದ ರಾಜೀನಾಮೆ ನೀಡಿದ್ದೇವೆ. ನಾವು ಮತ್ತೆ ಚುನಾವಣೆಯಲ್ಲಿ ಸ್ಫರ್ಧೆ ಮಾಡಿ ಗೆಲ್ಲುತ್ತೇನೆ. ಬಿಜೆಪಿ ಸೇರ್ಪಡೆಗೆ ಬಗ್ಗೆ ಕ್ಷೇತ್ರದ ಮತದಾರರ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇನೆ. ಯಾವುದೇ ಕಾರಣಕ್ಕೂ ಇನ್ನೊಮ್ಮೆ ಕಾಂಗ್ರೆಸ್​ ಕಡೆ ತಿರುಗಿಯೂ ನೋಡುವುದಿಲ್ಲ ಎಂದು ಹೇಳಿದ್ದಾರೆ.


ಹಾಗೇ ಮಾಜಿ ಸ್ಪೀಕರ್ ರಮೇಶ್ ಕುಮಾರ ವಿರುದ್ಧ ಕಿಡಿಕಾರಿದ ಅವರು, ರಮೇಶ್ ಕುಮಾರ್ ಅವರು ಕೆಲವರ ಮಾತು ಕೇಳಿ ಏಕಪಕ್ಷೀಯವಾಗಿ ಆದೇಶ ನೀಡಿದ್ದಾರೆ. ಇದರಿಂದ ನಾವು ವಿಚಲಿತರಾಗಿಲ್ಲ. ಸುಪ್ರೀಂಕೋರ್ಟ್​ನಲ್ಲಿ ನ್ಯಾಯಕ್ಕಾಗಿ ಮೊರೆಹೋಗಿದ್ದೇವೆ. ನ್ಯಾಯಾಲಯದಲ್ಲಿ ನಮಗೆ ನ್ಯಾಯ ಸಿಗುವ ನಂಬಿಕೆಯಿದೆ. ಉಪಚುನಾವಣೆಯಲ್ಲಿ ಕಾಂಗ್ರೆಸ್​ ಏನು ಬೇಕಾದರೂ ಮಾಡಲಿ. ಕಾಂಗ್ರೆಸ್​ನವರು ಮಾಡಿರುವ ಅನರ್ಹತೆಯನ್ನು ಮತದಾರರು ಅರ್ಹತೆಯಾಗಿ ಬದಲಿಸುತ್ತಾರೆಂಬ ವಿಶ್ವಾಸ ನಮಗಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments