ಯಾವುದೇ ಕಾರಣಕ್ಕೂ ಇನ್ನೊಮ್ಮೆ ಕಾಂಗ್ರೆಸ್​ ಕಡೆ ತಿರುಗಿಯೂ ನೋಡುವುದಿಲ್ಲ- ಬಿ.ಸಿ. ಪಾಟೀಲ್

Webdunia
ಭಾನುವಾರ, 4 ಆಗಸ್ಟ್ 2019 (11:46 IST)
ಬೆಂಗಳೂರು : ಯಾವುದೇ ಕಾರಣಕ್ಕೂ ಇನ್ನೊಮ್ಮೆ ಕಾಂಗ್ರೆಸ್​ ಕಡೆ ತಿರುಗಿಯೂ ನೋಡುವುದಿಲ್ಲ. ಕಾಂಗ್ರೆಸ್​ ಸೇರುವುದು ಕನಸಿನ ಮಾತು ಎಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅನರ್ಹಗೊಂಡಿದ್ದ ಹಿರೇಕೆರೂರು ಶಾಸಕ ಬಿ.ಸಿ. ಪಾಟೀಲ್ ಹೇಳಿದ್ದಾರೆ.




ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭಾ ಉಪ ಚುನಾವಣೆ ಬಗ್ಗೆ ಕಾಂಗ್ರೆಸ್ ಏನು ಮಾಡುತ್ತಿದೆ ಎಂದು ನಮಗೆ ಗೊತ್ತು. ನಾವು ಅಭಿವೃದ್ಧಿ ದೃಷ್ಟಿಯಿಂದ ರಾಜೀನಾಮೆ ನೀಡಿದ್ದೇವೆ. ನಾವು ಮತ್ತೆ ಚುನಾವಣೆಯಲ್ಲಿ ಸ್ಫರ್ಧೆ ಮಾಡಿ ಗೆಲ್ಲುತ್ತೇನೆ. ಬಿಜೆಪಿ ಸೇರ್ಪಡೆಗೆ ಬಗ್ಗೆ ಕ್ಷೇತ್ರದ ಮತದಾರರ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇನೆ. ಯಾವುದೇ ಕಾರಣಕ್ಕೂ ಇನ್ನೊಮ್ಮೆ ಕಾಂಗ್ರೆಸ್​ ಕಡೆ ತಿರುಗಿಯೂ ನೋಡುವುದಿಲ್ಲ ಎಂದು ಹೇಳಿದ್ದಾರೆ.


ಹಾಗೇ ಮಾಜಿ ಸ್ಪೀಕರ್ ರಮೇಶ್ ಕುಮಾರ ವಿರುದ್ಧ ಕಿಡಿಕಾರಿದ ಅವರು, ರಮೇಶ್ ಕುಮಾರ್ ಅವರು ಕೆಲವರ ಮಾತು ಕೇಳಿ ಏಕಪಕ್ಷೀಯವಾಗಿ ಆದೇಶ ನೀಡಿದ್ದಾರೆ. ಇದರಿಂದ ನಾವು ವಿಚಲಿತರಾಗಿಲ್ಲ. ಸುಪ್ರೀಂಕೋರ್ಟ್​ನಲ್ಲಿ ನ್ಯಾಯಕ್ಕಾಗಿ ಮೊರೆಹೋಗಿದ್ದೇವೆ. ನ್ಯಾಯಾಲಯದಲ್ಲಿ ನಮಗೆ ನ್ಯಾಯ ಸಿಗುವ ನಂಬಿಕೆಯಿದೆ. ಉಪಚುನಾವಣೆಯಲ್ಲಿ ಕಾಂಗ್ರೆಸ್​ ಏನು ಬೇಕಾದರೂ ಮಾಡಲಿ. ಕಾಂಗ್ರೆಸ್​ನವರು ಮಾಡಿರುವ ಅನರ್ಹತೆಯನ್ನು ಮತದಾರರು ಅರ್ಹತೆಯಾಗಿ ಬದಲಿಸುತ್ತಾರೆಂಬ ವಿಶ್ವಾಸ ನಮಗಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓಲೈಕೆ ರಾಜಕೀಯಕ್ಕೆ ಜನರಿಂದ ತಕ್ಕ ಉತ್ತರ: ವಿಜಯೇಂದ್ರ

ಸರಕಾರದ ಮತೀಯ ಓಲೈಕೆ ರಾಜಕಾರಣ: ಸಿ.ಟಿ.ರವಿ

ಕರ್ನಾಟಕದಲ್ಲೂ ಶುರುವಾಗಲಿದೆ ಮತದಾರರ ಪಟ್ಟಿ ಪರಿಷ್ಕರಣೆ: ಯಾವಾಗ ಇಲ್ಲಿದೆ ಡೀಟೈಲ್ಸ್

ರಾಹುಲ್ ಗಾಂಧಿ ಆಪ್ತರಾಗಿದ್ದರೂ ಕೆಸಿ ವೇಣುಗೋಪಾಲ್ ಗೆ ಸಿಎಂ ಸ್ಥಾನ ಸಿಗದಿದ್ದಕ್ಕೆ ಇದೇ ಕಾರಣ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments