Webdunia - Bharat's app for daily news and videos

Install App

ಮುಂಬೈನಿಂದ ಮಂಡ್ಯಕ್ಕೆ ಬಂತು ಡೆಡ್ಲಿ ಕೊರೊನಾ : ಒಂದೇ ದಿನ 8 ಕೇಸ್

Webdunia
ಶುಕ್ರವಾರ, 1 ಮೇ 2020 (16:22 IST)
ಡೆಡ್ಲಿ ವೈರಸ್ ಮಂಡ್ಯದಲ್ಲಿ ಎಂಟು ಜನರಲ್ಲಿ ಇರೋದು ದೃಢಪಟ್ಟಿದೆ. ಆ ಮೂಲಕ ಸಕ್ಕರೆ ನಾಡಿನಲ್ಲಿ ಮಹಾಮಾರಿಯ ವಿಷ ಏರತೊಡಗಿದೆ.

ಮಂಡ್ಯದ ಪಾಂಡವಪುರ ತಾಲೂಕು ಮೇಲುಕೋಟೆ ಸಮೀಪದ ಬಿ.ಕೊಡಗಹಳ್ಳಿ ಗ್ರಾಮದಲ್ಲಿ ನಾಲ್ವರಿಗೆ ಕೊರೊನಾ ಸೋಂಕು ತಗುಲಿದೆ.

ಮುಂಬೈನಲ್ಲಿ ಕೆಲಸ ಮಾಡಿಕೊಂಡಿದ್ದ ಬಿ.ಕೊಡಗಹಳ್ಳಿಯ ವ್ಯಕ್ತಿಯು, ಹತ್ತು ದಿನಗಳ ಹಿಂದೆ ಮೃತಪಟ್ಟಿದ್ದನು. ಹೀಗಾಗಿ ಮೃತನ ಶವವನ್ನು ಹುಟ್ಟೂರಿಗೆ ತಂದು ಅಂತ್ಯಕ್ರಿಯೆ ನೆರವೇರಿಸಲಾಗಿತ್ತು. ಈತ ಮುಂಬೈ ನಿವಾಸಿಯಾಗಿದ್ದರಿಂದ ಅನುಮಾನದ ಮೇರೆಗೆ ಮೃತನ ಕುಟುಂಬದವರನ್ನು ಕೆರೆತೊಣ್ಣೂರು ಗ್ರಾಮದ ಹಾಸ್ಟೆಲ್ಲೊಂದರಲ್ಲಿ ಹಾಸ್ಟೆಲ್ ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು.

ಅವರ ವೈದ್ಯಕೀಯ ಪರೀಕ್ಷೆ ವರದಿ ಬಂದಿದ್ದು, ನಾಲ್ಕು ಮಂದಿಗೆ ಕೊರೊನಾ ವೈರಸ್ ತಗುಲಿರುವುದು ದೃಢಪಟ್ಟಿದೆ.  ಈ ಹಿನ್ನೆಲೆಯಲ್ಲಿ ಕೊಡಗಹಳ್ಳಿ ಗ್ರಾಮವನ್ನು ಶೀಲ್ ಡೌನ್ ಮಾಡಲಾಗಿದೆ. ಮೇಲುಕೋಟೆ ಕೂಡ ಸಂಪೂರ್ಣ ಲಾಕ್ ಡೌನ್ ಮಾಡಲಾಗಿದೆ.

ಮಂಡ್ಯದಲ್ಲಿ ಇಬ್ಬರು ಯುವಕರು, ಒಬ್ಬಳು ಯುವತಿ ಮೂವರು ಬಾಂಬೆ ಟ್ರಾವೆಲ್ ಹಿಸ್ಟರಿ ಹೊಂದಿದ್ದರೆ ಇವರ ಜೊತೆ ಗುರ್ತಿಸಿಕೊಂಡಿದ್ದ ಕೆ.ಆರ್.ಪೇಟೆಯ ಮಹಿಳೆಯಲ್ಲಿರೂ ಕೊರೊನಾ ಕಾಣಿಸಿಕೊಂಡಿದೆ. ಇನ್ನು, ಮಳವಳ್ಳಿಯಲ್ಲಿ ಯುವಕ, ಮಹಿಳೆ ಹಾಗೂ ಇಬ್ಬರು ಗಂಡು ಮಕ್ಕಳಲ್ಲಿ ಕೊರೊನಾ ವೈರಸ್ ಕಾಣಿಸಿಕೊಂಡಿದೆ. ಒಟ್ಟು ಒಂದೇ ದಿನ 8 ಕೊರೊನಾ ಪಾಸಿಟಿವ್ ಕೇಸ್ ಗಳಿಗೆ ಮಂಡ್ಯ ಸಾಕ್ಷಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments