Webdunia - Bharat's app for daily news and videos

Install App

ಪಿಎಲ್‌ಡಿ ಬ್ಯಾಂಕ್‌ಗಳಿಗೂ ಸಾಲಮನ್ನಾ ವಿಸ್ತರಿಸುವಂತೆ ಒತ್ತಾಯ

Webdunia
ಗುರುವಾರ, 11 ಅಕ್ಟೋಬರ್ 2018 (16:47 IST)
ರಾಜ್ಯ ಸರ್ಕಾರ ರೈತರ ಬೆಳೆಸಾಲ ಮನ್ನಾ ಮಾಡಿರುವುದು ಸ್ವಾಗತಾರ್ಹ. ಆದರೇ ಅದೇ ರೀತಿ ರಾಜ್ಯದ 117 ಪಿಎಲ್‌ಡಿ ಬ್ಯಾಂಕ್‌ಗಳಲ್ಲಿ ರೈತರು ಪಡೆದಿರುವ ದೀರ್ಘಾವಧಿ ಕೃಷಿ ಸಾಲ ಮನ್ನಾ ಮಾಡುವಂತೆ ಆಗ್ರಹ ಕೇಳಿಬರುತ್ತಿದೆ.

ಕಲಬುರಗಿ ಜಿಲ್ಲೆಯ ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ಗಳು ಡಿಸಿ ಮೂಲಕ ಸಿಎಂ ಹೆಚ್‌. ಡಿ. ಕುಮಾರಸ್ವಾಮಿಗೆ ಮನವಿ ಮಾಡಿದ್ದಾರೆ. ಸಾಲಮನ್ನಾ ನಿರೀಕ್ಷೆಯಲ್ಲಿದ್ದ ರಾಜ್ಯದ 117 ಪಿಎಲ್‌ಡಿ ಬ್ಯಾಂಕ್‌ಗಳ ಮೂಲಕ ದೀರ್ಘಾವಧಿ ಕೃಷಿ ಸಾಲ ಪಡೆದ ರೈತರು ಸಹ ಸುಸ್ತಿದಾರರಾಗಿ ಮುಂದುವರೆದಿರುತ್ತಾರೆ. ಹೀಗಾಗಿ ಪಿಎಲ್‌ಡಿ ಬ್ಯಾಂಕ್‌ಗಳಲ್ಲಿ ಸಾಲ ಪಡೆದ ರೈತರಿಗೆ ಅನ್ಯಾಯವಾದಂತಾಗಿದೆ.

ಮತ್ತೊಂದೆಡೆ ಸಾಲ ವಸೂಲಾತಿಗಾಗಿ ಯಾವುದೇ ಕ್ರಮ  ವಹಿಸಬಾರದೆಂದು ಸರ್ಕಾರ ಆದೇಶಿಸಿದೆ. ಆದರೆ ಪಿಎಲ್‌ಡಿ ಬ್ಯಾಂಕ್‌ಗಳು ಶೇಕಡ 70ರಷ್ಟು ಸಾಲ ವಸೂಲಾತಿ ಮಾಡದಿದ್ದರೆ ಹೊಸ ಸಾಲ ಹಂಚಿಕೆ ನೀಡಲು ನಬಾರ್ಡ್ ಸಂಸ್ಥೆಯವರು ನಿರಾಕರಿಸಿರುತ್ತಾರೆ. ಇದರಿಂದ ಬ್ಯಾಂಕ್ ವ್ಯವಹಾರ ನಡೆಸುವುದು ಕಷ್ಟಕರವಾಗಿದ್ದು ಬ್ಯಾಂಕ್ ಸಿಬ್ಬಂದಿಗೂ ಮಾಸಿಕ ವೇತನ ನೀಡಲು ಕಷ್ಟಸಾಧ್ಯವಾಗಿದೆ. ಹೀಗಾಗಿ ಪಿಎಲ್‌ಡಿ ಬ್ಯಾಂಕ್‌ಗಳಲ್ಲಿನ ರೈತರ ಸಂಪೂರ್ಣ ಸಾಲಮನ್ನಾ ಇಲ್ಲವೇ ಸಂಪೂರ್ಣ ಬಡ್ಡಿ ಮನ್ನಾ ಮಾಡಬೇಕು. ಇಲ್ಲವೇ ಸಾಲ ವಸೂಲಾತಿಗೆ ನೋಟಿಸ್ ನೀಡಿ ಕ್ರಮವಿಡಲು ಅನುಮತಿ ಕೊಡಬೇಕು. ಸಾಲ ವಸೂಲಾತಿ ನಿರ್ಬಂಧ ಪರಿಗಣಿಸದೇ ಹೊಸ ಸಾಲ ನೀಡುವುದಕ್ಕೆ ಅನುಮತಿ ಕೊಡಿಸಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಇವುಗಳಲ್ಲಿ ಯಾವುದಾದರೂ ಒಂದು ಪ್ರಯೋಜನಕಾರಿ ಅಂಶ ಪರಿಗಣಿಸದಿದ್ದಲ್ಲಿ ರಾಜ್ಯದ 177 ಬ್ಯಾಂಕ್‌ಗಳು ತಮ್ಮ ಅಸ್ತಿತ್ವ ಉಳಿಸಿಕೊಂಡು ರೈತರಿಗೆ ಸಾಲ ನೀಡಲು ವಿಫಲವಾಗಿ ನಶಿಸಿ ಹೋಗುತ್ತವೆ. ಪಿಎಲ್‌ಡಿ ಬ್ಯಾಂಕ್ ಸಿಬ್ಬಂದಿ ಭವಿಷ್ಯ ಸರ್ಕಾರದ ಹೊಣೆಯಾಗಿದ್ದು ತಕ್ಷಣ ಕ್ರಮ ಕೈಗೊಳ್ಳುವಂತೆ ಕಲಬುರಗಿ ಡಿಸಿ ಮೂಲಕ ಸಿಎಂ ಹೆಚ್‌.ಡಿ.ಕುಮಾರಸ್ವಾಮಿಗೆ ಕಲಬುರಗಿ ಜಿಲ್ಲಾ ಪಿಎಲ್‌ಡಿ ಬ್ಯಾಂಕ್‌ಗಳ ಪರವಾಗಿ ಮನವಿ ಸಲ್ಲಿಸಲಾಯಿತು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

ಮುಂದಿನ ಸುದ್ದಿ
Show comments