Select Your Language

Notifications

webdunia
webdunia
webdunia
webdunia

ಧರ್ಮಸ್ಥಳದ ವಿರುದ್ಧ ಷಡ್ಯಂತ್ರಕ್ಕೆ ವಿದೇಶಿ ಫಂಡಿಂಗ್‌: ನಿಖಿಲ್ ಕುಮಾರಸ್ವಾಮಿ ಆರೋಪ

ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ

Sampriya

ಮಂಡ್ಯ , ಶನಿವಾರ, 30 ಆಗಸ್ಟ್ 2025 (15:41 IST)
ಮಂಡ್ಯ: ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ ರೂಪಿಸಲು ವಿದೇಶಿ ಫಂಡಿಂಗ್ ನಡೆದಿರುವ ಬಗ್ಗೆ ಅನುಮಾನ ಇದೆ. ಇದರ ಬಗ್ಗೆ ಸತ್ಯಾಸತ್ಯತೆ ಹೊರತರಲು NIA ತನಿಖೆ ಅವಶ್ಯಕವಾಗಿದೆ ಎಂದು JDS ಯುವ ಘಟದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಧರ್ಮಸ್ಥಳ ಪಾವಿತ್ರ್ಯತೆಯನ್ನ ಹಾಳು ಮಾಡಲು ಒಳಸಂಚು ರೂಪಿಸಿದ್ದು, ರಾಜ್ಯದ ಜನರಿಗೆ SIT ತನಿಖೆ ಮೇಲೆ ನಿರೀಕ್ಷೆಗಳಿಲ್ಲ. NIA ತನಿಖೆಗೆ ವಹಿಸಿದರೆ ಷಡ್ಯಂತ್ರ ಬಯಲಾಗಲಿದೆ ಎಂದು ಹೇಳಿದರು.

ಧರ್ಮಸ್ಥಳ ಯಾತ್ರೆಗೆ ಹಾಸನವನ್ನು ಕೇಂದ್ರ ಸ್ಥಾನವನ್ನಾಗಿ ಮಾಡಿದ್ದು, ಮುಖಂಡರು, ಕಾರ್ಯಕರ್ತರು ಹಾಸನಕ್ಕೆ ತೆರಳಲಿದ್ದಾರೆ. ಅಲ್ಲಿ ಉಪಾಹಾರ ವ್ಯವಸ್ಥೆ ಮಾಡಲಾಗಿದೆ.ನಂತರ ಧರ್ಮಸ್ಥಳ ನೇತ್ರಾವತಿಗೆ ತೆರಳಿ, ಅಲ್ಲಿ ಸ್ನಾನ ಮಾಡಿದ ಬಳಿಕ ಅಲ್ಲಿಂದ ಮಂಜುನಾಥಸ್ವಾಮಿ ದೇವಸ್ಥಾನದವರೆಗೆ ಪಾದಯಾತ್ರೆ ಮಾಡುತ್ತೇವೆ. ಈ ಯಾತ್ರೆಯಲ್ಲಿ ಜೆಡಿಎಸ್‌‍ ಲೋಕಸಭಾ ಸದಸ್ಯರು, ಶಾಸಕರು, ಮಾಜಿ ಸಂಸದರು, ಮಾಜಿ ಸಚಿವರು, ಮಾಜಿ ಶಾಸಕರು, ಕಾರ್ಯಕರ್ತರು, ಭಕ್ತರು ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಲಿದ್ದಾರೆ ಎಂದು ತಿಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಅದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ: ಪ್ರಮೋದಾದೇವಿ ಒಡೆಯರ್