Webdunia - Bharat's app for daily news and videos

Install App

ಚಾಮರಾಜನಗರದಲ್ಲಿ ಕಾಡಾನೆ ಸೆರೆ

Webdunia
ಬುಧವಾರ, 11 ಜನವರಿ 2023 (17:53 IST)
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ G.S ಬೆಟ್ಟ ವಲಯದ ಸುತ್ತಮುತ್ತ ರೈತರಿಗೆ ತಲೆನೋವಾಗಿದ್ದ ಕಾಡಾನೆಯನ್ನು ಸೆರೆ ಹಿಡಿಯಲಾಗಿದೆ. ಸಾಕಾನೆಗಳಾದ ಅಭಿಮನ್ಯು, ಮಹೇಂದ್ರ, ಗಣೇಶ, ಭೀಮ ಸಹಾಯದಿಂದ ಅರವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿಯಲಾಯಿತು. ಕಡೈಕೋಟೆ ಎಂಬಲ್ಲಿ ಸೆರೆ ಹಿಡಿಯಲಾಗಿದೆ.  ಬೆಳೆ ಹಾನಿ ಮಾಡುತ್ತಿದ್ದ ಕಾಡಾನೆಯನ್ನ ಸೆರೆ ಹಿಡಿಯುವಂತೆ ಅನೇಕ ಬಾರಿ ಒತ್ತಾಯ ಮಾಡಲಾಗಿತ್ತು. ಇದೀಗ ಆನೆಯನ್ನ ಸೆರೆ ಹಿಡಿದು, ಐನೋರ್ ಮಾರಿಗುಡಿ ಸಾಕಾನೆಗಳ ಶಿಬಿರಕ್ಕೆ ರವಾನೆ ಮಾಡಲಾಗಿದೆ. ಜಿಲ್ಲೆಯಲ್ಲಿ ಕಾಡಾನೆಗಳಿಂದ ಅನೇಕ ರೈತರು ಜೀವ ಕಳೆದುಕೊಂಡಿದ್ದರು. ಇತ್ತೀಚೆಗಷ್ಟೇ ಹೊಲದಲ್ಲಿರುವ ಸಮಯದಲ್ಲಿ ಅಂಧ ವ್ಯಕ್ತಿಯ ಮೇಲೆ ಕಾಡಾನೆಗಳು ದಾಳಿ ಮಾಡಿತ್ತು. ನಂತರ ಗುಂಡ್ಲುಪೇಟೆ ತಾಲೂಕಿನ ಬೆಟ್ಟ ಮಾದಹಳ್ಳಿ ಗ್ರಾಮದ ರೈತನ ಮೇಲೆ ಏಕಾಏಕಿ ಆನೆಗಳು ದಾಳಿ ಮಾಡಿ, ಬೈಕ್​ನ್ನು ಜಖಂಗೊಳಿಸಿದ್ದವು. ಇದೀಗ ಆನೆಯನ್ನ ಸೆರೆ ಹಿಡಿದಿದ್ದು, ರೈತರು ನಿಟ್ಟುಸಿರು ಬೀಡುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆ.1ರಂದು ಧರ್ಮಸ್ಥಳ ಚಲೋ, ಬೃಹತ್ ಸಮಾವೇಶ:ವಿಜಯೇಂದ್ರ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಮುಂದಿನ ಸುದ್ದಿ
Show comments