Select Your Language

Notifications

webdunia
webdunia
webdunia
webdunia

ಕಾಡಾನೆ ದಾಳಿಗೆ ಬೆಳೆ ನಾಶ

ಹುಣಸೂರಿನಲ್ಲಿ ಕಾಡಾನೆ ದಾಳಿಗೆ ಬೆಳೆ ನಾಶ
ಕಾಡಾನೆ ದಾಳಿಗೆ ಮಲೆನಾಡಿನ ರೈತರು ರೋಸಿ ಹೋಗಿದ್ದಾರೆ. ಮೈಸೂರು ಭಾಗದಲ್ಲೂ ದಿನಂಪ್ರತಿ ಕಾಡಾನೆಗಳು ಹಿಂಡು ಹಿಂಡಾಗಿ ದಾಳಿ ನಡೆಸಿ, ಬೆಳೆ ನಾಶಗೊಳಿಸ್ತಿವೆ. ಮೈಸೂರಿನ ಹುಣಸೂರು ತಾಲ್ಲೂಕಿನ ಕಾಳೇನಹಳ್ಳಿ ಗ್ರಾಮದಲ್ಲಿ ಕಾಡಾನೆ ಹಿಂಡು ಅಪಾರ ಪ್ರಮಾಣದ ಬೆಳೆ ನಾಶ ಮಾಡಿವೆ. ಒಟ್ಟು 6 ಆನೆಗಳು ಕೃಷಿ ಭೂಮಿಗೆ ಲಗ್ಗೆ ಇಟ್ಟಿದ್ದು, ಹತ್ತಾರು ಎಕರೆಯಲ್ಲಿ ಬೆಳೆದಿದ್ದ ಮೆಕ್ಕೆಜೋಳ ಬಾಳೆ, ತೆಂಗು, ಕಬ್ಬು ಮತ್ತು ಅಡಿಕೆ ಬೆಳೆಯನ್ನು ನಾಶಗೊಳಿಸಿವೆ. ಪದೇ ಪದೇ ಕಾಡಿನಿಂದ ನಾಡಿಗೆ ಆನೆಗಳು ಬರುತ್ತಿದ್ದು, ಜನ ಕಂಗಾಲಾಗಿದ್ದಾರೆ.  ನಟೇಶ್, ಶಮಿಯುಲ್ಲಾ, ಪ್ರದೀಪ್​​ ಎಂಬುವವರಿಗೆ ಸೇರಿದ್ದ ಜಮೀನಿನಲ್ಲಿ ಆನೆಗಳು ಪುಂಡಾಟ ಮೆರೆದಿವೆ. ಅಪಾರ ಮೌಲ್ಯದ ಬೆಳೆ ನಾಶವಾಗಿದ್ದು, ರೈತರು ತಲೆ ಮೇಲೆ ಕೈಹೊತ್ತು ಕೂರುವಂತಾಗಿದೆ. ಆನೆ ದಾಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ರೈತರು ಅರಣ್ಯ ಇಲಾಖೆ ಸಿಬ್ಬಂದಿಗೆ ಒತ್ತಾಯ ಮಾಡ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಹಾರಾಷ್ಟ್ರದ ವಿರುದ್ಧ ರೊಚ್ಚಿಗೆದ್ದ ವಾಟಾಳ್ ನಾಗರಾಜ್