Select Your Language

Notifications

webdunia
webdunia
webdunia
webdunia

ಕಾಡಾನೆ ದಾಳಿಗೆ ಬೆಳೆ ನಾಶ

ಕಾಡಾನೆ ದಾಳಿಗೆ ಬೆಳೆ ನಾಶ
ಮೈಸೂರು , ಶನಿವಾರ, 26 ನವೆಂಬರ್ 2022 (15:26 IST)
ಕಾಡಾನೆ ದಾಳಿಗೆ ಮಲೆನಾಡಿನ ರೈತರು ರೋಸಿ ಹೋಗಿದ್ದಾರೆ. ಮೈಸೂರು ಭಾಗದಲ್ಲೂ ದಿನಂಪ್ರತಿ ಕಾಡಾನೆಗಳು ಹಿಂಡು ಹಿಂಡಾಗಿ ದಾಳಿ ನಡೆಸಿ, ಬೆಳೆ ನಾಶಗೊಳಿಸ್ತಿವೆ. ಮೈಸೂರಿನ ಹುಣಸೂರು ತಾಲ್ಲೂಕಿನ ಕಾಳೇನಹಳ್ಳಿ ಗ್ರಾಮದಲ್ಲಿ ಕಾಡಾನೆ ಹಿಂಡು ಅಪಾರ ಪ್ರಮಾಣದ ಬೆಳೆ ನಾಶ ಮಾಡಿವೆ. ಒಟ್ಟು 6 ಆನೆಗಳು ಕೃಷಿ ಭೂಮಿಗೆ ಲಗ್ಗೆ ಇಟ್ಟಿದ್ದು, ಹತ್ತಾರು ಎಕರೆಯಲ್ಲಿ ಬೆಳೆದಿದ್ದ ಮೆಕ್ಕೆಜೋಳ ಬಾಳೆ, ತೆಂಗು, ಕಬ್ಬು ಮತ್ತು ಅಡಿಕೆ ಬೆಳೆಯನ್ನು ನಾಶಗೊಳಿಸಿವೆ. ಪದೇ ಪದೇ ಕಾಡಿನಿಂದ ನಾಡಿಗೆ ಆನೆಗಳು ಬರುತ್ತಿದ್ದು, ಜನ ಕಂಗಾಲಾಗಿದ್ದಾರೆ.  ನಟೇಶ್, ಶಮಿಯುಲ್ಲಾ, ಪ್ರದೀಪ್​​ ಎಂಬುವವರಿಗೆ ಸೇರಿದ್ದ ಜಮೀನಿನಲ್ಲಿ ಆನೆಗಳು ಪುಂಡಾಟ ಮೆರೆದಿವೆ. ಅಪಾರ ಮೌಲ್ಯದ ಬೆಳೆ ನಾಶವಾಗಿದ್ದು, ರೈತರು ತಲೆ ಮೇಲೆ ಕೈಹೊತ್ತು ಕೂರುವಂತಾಗಿದೆ. ಆನೆ ದಾಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ರೈತರು ಅರಣ್ಯ ಇಲಾಖೆ ಸಿಬ್ಬಂದಿಗೆ ಒತ್ತಾಯ ಮಾಡ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಹಾರಾಷ್ಟ್ರದ ವಿರುದ್ಧ ರೊಚ್ಚಿಗೆದ್ದ ವಾಟಾಳ್ ನಾಗರಾಜ್