Webdunia - Bharat's app for daily news and videos

Install App

ಕಾಡಾನೆ ದಾಳಿಗೆ ಬೆಳೆ ನಾಶ

Webdunia
ಶನಿವಾರ, 26 ನವೆಂಬರ್ 2022 (15:26 IST)
ಕಾಡಾನೆ ದಾಳಿಗೆ ಮಲೆನಾಡಿನ ರೈತರು ರೋಸಿ ಹೋಗಿದ್ದಾರೆ. ಮೈಸೂರು ಭಾಗದಲ್ಲೂ ದಿನಂಪ್ರತಿ ಕಾಡಾನೆಗಳು ಹಿಂಡು ಹಿಂಡಾಗಿ ದಾಳಿ ನಡೆಸಿ, ಬೆಳೆ ನಾಶಗೊಳಿಸ್ತಿವೆ. ಮೈಸೂರಿನ ಹುಣಸೂರು ತಾಲ್ಲೂಕಿನ ಕಾಳೇನಹಳ್ಳಿ ಗ್ರಾಮದಲ್ಲಿ ಕಾಡಾನೆ ಹಿಂಡು ಅಪಾರ ಪ್ರಮಾಣದ ಬೆಳೆ ನಾಶ ಮಾಡಿವೆ. ಒಟ್ಟು 6 ಆನೆಗಳು ಕೃಷಿ ಭೂಮಿಗೆ ಲಗ್ಗೆ ಇಟ್ಟಿದ್ದು, ಹತ್ತಾರು ಎಕರೆಯಲ್ಲಿ ಬೆಳೆದಿದ್ದ ಮೆಕ್ಕೆಜೋಳ ಬಾಳೆ, ತೆಂಗು, ಕಬ್ಬು ಮತ್ತು ಅಡಿಕೆ ಬೆಳೆಯನ್ನು ನಾಶಗೊಳಿಸಿವೆ. ಪದೇ ಪದೇ ಕಾಡಿನಿಂದ ನಾಡಿಗೆ ಆನೆಗಳು ಬರುತ್ತಿದ್ದು, ಜನ ಕಂಗಾಲಾಗಿದ್ದಾರೆ.  ನಟೇಶ್, ಶಮಿಯುಲ್ಲಾ, ಪ್ರದೀಪ್​​ ಎಂಬುವವರಿಗೆ ಸೇರಿದ್ದ ಜಮೀನಿನಲ್ಲಿ ಆನೆಗಳು ಪುಂಡಾಟ ಮೆರೆದಿವೆ. ಅಪಾರ ಮೌಲ್ಯದ ಬೆಳೆ ನಾಶವಾಗಿದ್ದು, ರೈತರು ತಲೆ ಮೇಲೆ ಕೈಹೊತ್ತು ಕೂರುವಂತಾಗಿದೆ. ಆನೆ ದಾಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ರೈತರು ಅರಣ್ಯ ಇಲಾಖೆ ಸಿಬ್ಬಂದಿಗೆ ಒತ್ತಾಯ ಮಾಡ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments