Webdunia - Bharat's app for daily news and videos

Install App

ಊರುಗೊಲ್ಲರು ಊರಿನಲ್ಲಿಯೇ ಉಳಿಯಿರಿ: ಸಿದ್ದರಾಮಯ್ಯ

Webdunia
ಭಾನುವಾರ, 6 ಸೆಪ್ಟಂಬರ್ 2015 (10:29 IST)
ಕಾಡುಗೊಲ್ಲರಿಗೆ ಅಗತ್ಯವಿರುವ ಆ ಎಲ್ಲಾ ರೀತಿಯ ನೆರವನ್ನು ಒದಗಿಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಯಾರೂ ಕೂಡ ಊರು ತೊರೆಯಬೇಡಿ ಎಂದು ಸಿಎಂ ಸಿದ್ದರಾಮಯ್ಯ ಅವರು ನಿನ್ನೆ ಮನವಿ ಮಾಡಿದ್ದಾರೆ. 
 
ವಿಧಾನಸೌಧದಲ್ಲಿ ಆಯೋಜಿಸಲಾಗಿದ್ದ ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಡುಗೊಲ್ಲರು ಊರು ಗೊಲ್ಲರಾಗಬೇಕು. ಊರುಗೊಲ್ಲರು ಊರಿನಲ್ಲಿಯೇ ಉಳಿಯಿರಿ ಎಂದು ಕರೆ ನೀಡಿದರು.  
 
ನನಗೂ ಕೂಡ ಕೃಷ್ಣನ ಯುಕ್ತಿ ರಾಜಕಾರಣದಲ್ಲಿ ಅಗತ್ಯವಿದ್ದು, ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದೆ. ಆದರೂ ಕೂಡ ನನ್ನನ್ನು ಅಹಿಂದಾ ಪರವಾದ ರಾಜಕಾರಣಿ ಎನ್ನುತ್ತಾರೆ. ಇದರ ಅರ್ಥ ನಾನು ಎಲ್ಲಾ ವರ್ಗದ ಜನತೆಗೆ ನಾಯಕನಲ್ಲ ಎಂಬ ಅರ್ಥದಲ್ಲಿ ಕುಟುಕುತ್ತಿದ್ದಾರೆ. ನಾನು ಅಹಿಂದ ವರ್ಗದವರಿಗೆ ಮಾತ್ರ ಅಕ್ಕಿ ನೀಡಿಲ್ಲ, ಯಾರೋ ಸಾಮಾಜಿಕ ನ್ಯಾಯಕ್ಕೆ ವಿರೋಧವಾಗಿದ್ದವರು ಈ ರೀತಿ ಟೀಕೆ ಮಾಡುತ್ತಾರೆ ಎಂದು ಟೀಕಾಕಾರರಿಗೆ ತಿರುಗೇಟು ನೀಡಿದರು.
 
ಇದೇ ವೇಳೆ ಯಾದವ ಸಮುದಾಯದ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಒದಗಿಸುವಂತೆ ಕೆಲ ಸಭಿಕರು ಸಿದ್ದರಾಮಯ್ಯ ಅವರನ್ನು ಘೋಷಣೆ ಕೂಗುವ ಮೂಲಕ ಆಗ್ರಹಿಸಿದರು. ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಯಾದವ ಸಮುದಾಯದ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಿಕೊಡುವುದಾಗಿ ತಿಳಿಸಿದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments