Webdunia - Bharat's app for daily news and videos

Install App

ನೇಣಿಗೆ ಶರಣಾದ ಅರಣ್ಯ ರಕ್ಷಕ ಕುಟುಂಬ

Webdunia
ಸೋಮವಾರ, 21 ಫೆಬ್ರವರಿ 2022 (18:16 IST)
ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ನೊಂದ ಪತಿಯೂ ಆತ್ಮಹತ್ಯೆಗೆ ಶರಣಾದ ಘಟನೆ ಇಲ್ಲಿಗೆ ಸಮೀಪದ ಬಿರುನಾಣಿಯಲ್ಲಿ ನಡೆದಿದೆ. ಅರಣ್ಯ ಇಲಾಖೆಯ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಮೊಗ್ಗ ಮೂಲದ ಯುವರಾಜ್ (25) ಮತ್ತು ಪತ್ನಿ ಶಿಲ್ಪಾ (22) ಇಹಲೋಕ ತ್ಯಜಿಸಿದವರಾಗಿದ್ದಾರೆ.
ಶ್ರೀಮಂಗಲ ವನ್ಯಜೀವಿ ವಿಭಾಗದ ವ್ಯಾಪ್ತಿಯ ಬಿರುನಾಣಿಯಲ್ಲಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವರಾಜ್ ಕಳೆದ 10 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದು, ಬಿರುನಾಣಿಯ ಸಿ.ಸತ್ಯ ಎಂಬವರ ಮನೆಯಲ್ಲಿ ವಾಸವಾಗಿದ್ದರು.
ಭಾನುವಾರ ಸಂಜೆ ಕರ್ತವ್ಯ ಮುಗಿಸಿ ಯುವರಾಜ್ ಮನೆಗೆ ಬಂದಾಗ ಪತ್ನಿ ಶಿಲ್ಪಾ ವೇಲ್’ನಿಂದ ಬಾತ್ ರೂಮ್’ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾಗಿದ್ದು, ಇದನ್ನು ನೋಡಿ ಮನೆ ಮಾಲಕ ಸತ್ಯ ಅವರನ್ನು ಕರೆದು ಮೃತದೇಹವನ್ನು ಇಬ್ಬರೂ ಸೇರಿ ಇಳಿಸಿದ್ದಾರೆ.
ಈ ವಿಷಯವನ್ನು ಸಂಬಂಧಿಕರಿಗೆ ದೂರವಾಣಿ ಮೂಲಕ ತಿಳಿಸಿದ್ದ ಯುವರಾಜ್, ಸ್ವಲ್ಪ ಸಮಯದಲ್ಲೇ ಬಾತ್ ರೂಮ್’ಗೆ ಹೋಗಿ ಪತ್ನಿ ನೇಣು ಬಿಗಿದು ಕೊಂಡಿದ್ದ ವೇಲ್’ನಿಂದ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಶ್ರೀಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಕೊಡಗು ವನ್ಯಜೀವಿ ಎ. ಸಿ.ಎಫ್.ದಯಾನಂದ್, ಶ್ರೀಮಂಗಲ ಆರ್.ಎಫ್.ಓ.ವೀರೇಂದ್ರ ಮರಿಬಸಣ್ಣವರ್ ಭೇಟಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments