Select Your Language

Notifications

webdunia
webdunia
webdunia
webdunia

ಪತ್ನಿ ಸಮೇತರಾಗಿ ಅಮಾವಾಸ್ಯೆ ಪೂಜೆ ನೆರವೇರಿಸಿದ ಕುಮಾರಸ್ವಾಮಿ

ಪತ್ನಿ ಸಮೇತರಾಗಿ ಅಮಾವಾಸ್ಯೆ ಪೂಜೆ ನೆರವೇರಿಸಿದ ಕುಮಾರಸ್ವಾಮಿ
ಮಂಡ್ಯ , ಬುಧವಾರ, 26 ಏಪ್ರಿಲ್ 2017 (20:34 IST)
ಮಾಜಿ ಸಿಎಂ ಕುಮಾರಸ್ವಾಮಿ ಪತ್ನಿ ಸಮೇತರಾಗಿ ಇವತ್ತು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿ ಚುಂಚನಗಿರಿಗೆ ಭೇಟಿ ನೀಡಿದ್ದರು. ಈ ಸಂದರ್ಭ ದಂಪತಿ ಕಾಲಭೈರವೇಶ್ವರನ ಸನ್ನಿಧಿಯಲ್ಲಿ ಅಮಾವಾಸ್ಯೆ ಪೂಜೆ ನೆರವೇರಿಸಿದ್ದಾರೆ.

ಈ ಹಿಂದೆ ದೇವೇಗೌಡರು ಸಹ ಅಮಾವಾಸ್ಯೆ ಪೂಜೆ ನೆರವೇರಿಸಿದ್ದರು. ಇದೀಗ, ಕುಮಾರಸ್ವಾಮಿ ಸಹ ಪೂಜೆ ನೆರವೇರಿಸಿದ್ದಾರೆ. ಬಳಿಕ ದಂಪತಿ ನಿರ್ಮಲಾನಂದ ಶ್ರೀಗಳ ಆಶೀರ್ವಾದ ಪಡೆದರು.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರದ ಗದ್ದುಗೆ ಏರಲು ರಾಜ್ಯದ ಹಲವೆಡೆ ಕುಮಾರಸ್ವಾಮಿ ಪ್ರವಾಸ ಮಾಡಿದ್ದಾರೆ. ಹೀಗಾಗಿ, ಪಕ್ಷದ ಜಯಕ್ಕಾಗಿ ಪ್ರಾರ್ಥಿಸಿ ಕಾಳಭೈರವೇಶ್ವರನ ಮೊರೆ ಹೋಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ. ಕುಮಾರಸ್ವಾಮಿ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

 

Share this Story:

Follow Webdunia kannada

ಮುಂದಿನ ಸುದ್ದಿ

ಪರ ಪುರುಷನನ್ನ ನೋಡಬಾರದೆಂದು ಪತ್ನಿಯ ಕಣ್ಣನ್ನೇ ಕಿತ್ತ ಪತಿ