Select Your Language

Notifications

webdunia
webdunia
webdunia
webdunia

ಟ್ವೀಟರ್ ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ

ಟ್ವೀಟರ್ ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ
bangalore , ಬುಧವಾರ, 28 ಜೂನ್ 2023 (14:41 IST)
ಒಂದೇ ಹುದ್ದೆಗೆ ನಾಲ್ವರ ಅಧಿಕಾರಗಳ ವರ್ಗಾವಣೆಗೆ ಶಿಫಾರಸ್ಸು ವಿಚಾರವಾಗಿ ಟ್ವೀಟರ್ ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
 
ಪಂಚಗ್ಯಾರಂಟಿಗಳ ಕಾಂಗ್ರೆಸ್  ಸರ್ಕಾರ, ಈಗ 6ನೇ ಗ್ಯಾರಂಟಿಯನ್ನೂ ಖಾತ್ರಿಗೊಳಿಸಿದೆ.ಅದು; ʼಕಾಸಿಗಾಗಿ ಪೋಸ್ಟಿಂಗ್!!ʼಅಧಿಕಾರಕ್ಕೆ ಬಂದು ತಿಂಗಳು ಮುಗಿಯುತ್ತಿದ್ದಂತೆಯೇ ,ವರ್ಗಾವಣೆ ದಂಧೆಯ ಕೊಚ್ಚೆಯಲ್ಲಿ ಈ ಸರ್ಕಾರ ಎಗ್ಗಿಲ್ಲದೆ ಉರುಳಾಡುತ್ತಿದೆ ಎನ್ನುವುದಕ್ಕೆ ಈ ವರದಿಯೇ ಸಾಕ್ಷಿಯಾಗಿದೆ.ಸ್ವತಃ ಮುಖ್ಯಮಂತ್ರಿ ಕಚೇರಿಯಲ್ಲೇ ವರ್ಗಾವರ್ಗಿ ದಂಧೆಗೆ ʼಹುಂಡಿʼ ಇದೆ ಎನ್ನುವುದು ಇಲ್ಲಿ ದಾಖಲೆ ಸಮೇತ ಬಟಾಬಯಲಾಗಿದೆ.ಒಂದೇ ಹುದ್ದೆಗೆ ಸ್ವತಃ ಮುಖ್ಯಮಂತ್ರಿ ಅವರೇ ನಾಲ್ವರಿಗೆ ಶಿಫಾರಸು ಪತ್ರ ಕೊಟ್ಟಿದ್ದಾರೆ!! ಸಿಎಂ ಕಚೇರಿಯಲ್ಲಿ ಏನೇನು ನಡೆಯುತ್ತಿದೆ? CMO ಅಂದರೆ @CMofKarnataka ವೋ ಅಥವಾ Corruption of Karnataka ವೋ?? 4 ಶಿಫಾರಸುಗಳ ಹಿಂದಿರುವ ಆ ʼಅತೀಂದ್ರʼ ಶಕ್ತಿ (!?) ಯಾವುದು ?ಮೂರೊಪ್ಪತ್ತೂ ಶಿಫಾರಸು ಪತ್ರಗಳನ್ನು ಟೈಪಿಸಿ, ಸಿಎಂ ಸಾಹೇಬರ ಸಹಿ ಮಾಡಿಸುವುದರಲ್ಲಿಯೇ ಅಧಿಕಾರಿಗಳು ತಲ್ಲೀನರಾಗಿದ್ದಾರೆನ್ನುವುದು ಖಾತ್ರಿ.ವರ್ಗಾವಣೆಯ ಪೇಮೆಂಟ್‌ ಕೋಟಾ ನಿಯಂತ್ರಣ ಮಾಡುತ್ತಿರುವ ಆ ʼರಿಮೋಟ್‌ ಕಂಟ್ರೋಲ್‌ʼ ಬಗ್ಗೆ ಜನಕ್ಕೆ ಅರ್ಥವಾಗುತ್ತಿದೆ.ಈ ಕಾಂಡದ ಸರ್ಕಾರ ಬಂದ ಮೊದಲ ದಿನದಿಂದಲೇ ʼಕಾಸಿಗಾಗಿ ಪೋಸ್ಟಿಂಗ್‌ʼ ದಂಧೆ ಶುರುವಾಗಿದೆ
 
 ಸರ್ಕಾರ ಕೆಲಸ ದೇವರ ಕೆಲಸʼ ಎನ್ನುವುದರ ಬದಲು ಬಂದಿದ್ದನ್ನು ಬಿಡದೇ ಬಾಚಿಕೋ ಎಂಬುದು ಈ ಸರ್ಕಾರ ಧ್ಯೇಯನೀತಿ ಆಗಿದೆ.ಜನರ ಹಣೆಗೆ ಗ್ಯಾರಂಟಿ ತುಪ್ಪ ಸವರಿ, ಬಿಟ್ಟಿಭಾಗ್ಯದ ಬೆಲ್ಲದ ಆಮಿಷವೊಡ್ಡಿ.ಲೂಟಿಪರ್ವಕ್ಕೆ ʼಹುಂಡಿʼ ಇಡಲಾಗಿದೆ.ಸಿಎಂ ಸಿದ್ದು,ಯತೀಂದ್ರ ವಿರುದ್ಧ ವಾಸಾಕ್ಷಿಯಾಗಿದೆ ಎಂದು‌ ಮಾಜಿ‌ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಾರಿಗೆ ಇಲಾಖೆ ನೌಕರರಿಗೆ ಸರಿಯಾದ ಸಮಯಕ್ಕೆ ಸಂಬಳ ಕೊಡ್ತೀವಿ : ರಾಮಲಿಂಗಾರೆಡ್ಡಿ