Webdunia - Bharat's app for daily news and videos

Install App

ಟ್ವೀಟರ್ ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ

Webdunia
ಬುಧವಾರ, 28 ಜೂನ್ 2023 (14:41 IST)
ಒಂದೇ ಹುದ್ದೆಗೆ ನಾಲ್ವರ ಅಧಿಕಾರಗಳ ವರ್ಗಾವಣೆಗೆ ಶಿಫಾರಸ್ಸು ವಿಚಾರವಾಗಿ ಟ್ವೀಟರ್ ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
 
ಪಂಚಗ್ಯಾರಂಟಿಗಳ ಕಾಂಗ್ರೆಸ್  ಸರ್ಕಾರ, ಈಗ 6ನೇ ಗ್ಯಾರಂಟಿಯನ್ನೂ ಖಾತ್ರಿಗೊಳಿಸಿದೆ.ಅದು; ʼಕಾಸಿಗಾಗಿ ಪೋಸ್ಟಿಂಗ್!!ʼಅಧಿಕಾರಕ್ಕೆ ಬಂದು ತಿಂಗಳು ಮುಗಿಯುತ್ತಿದ್ದಂತೆಯೇ ,ವರ್ಗಾವಣೆ ದಂಧೆಯ ಕೊಚ್ಚೆಯಲ್ಲಿ ಈ ಸರ್ಕಾರ ಎಗ್ಗಿಲ್ಲದೆ ಉರುಳಾಡುತ್ತಿದೆ ಎನ್ನುವುದಕ್ಕೆ ಈ ವರದಿಯೇ ಸಾಕ್ಷಿಯಾಗಿದೆ.ಸ್ವತಃ ಮುಖ್ಯಮಂತ್ರಿ ಕಚೇರಿಯಲ್ಲೇ ವರ್ಗಾವರ್ಗಿ ದಂಧೆಗೆ ʼಹುಂಡಿʼ ಇದೆ ಎನ್ನುವುದು ಇಲ್ಲಿ ದಾಖಲೆ ಸಮೇತ ಬಟಾಬಯಲಾಗಿದೆ.ಒಂದೇ ಹುದ್ದೆಗೆ ಸ್ವತಃ ಮುಖ್ಯಮಂತ್ರಿ ಅವರೇ ನಾಲ್ವರಿಗೆ ಶಿಫಾರಸು ಪತ್ರ ಕೊಟ್ಟಿದ್ದಾರೆ!! ಸಿಎಂ ಕಚೇರಿಯಲ್ಲಿ ಏನೇನು ನಡೆಯುತ್ತಿದೆ? CMO ಅಂದರೆ @CMofKarnataka ವೋ ಅಥವಾ Corruption of Karnataka ವೋ?? 4 ಶಿಫಾರಸುಗಳ ಹಿಂದಿರುವ ಆ ʼಅತೀಂದ್ರʼ ಶಕ್ತಿ (!?) ಯಾವುದು ?ಮೂರೊಪ್ಪತ್ತೂ ಶಿಫಾರಸು ಪತ್ರಗಳನ್ನು ಟೈಪಿಸಿ, ಸಿಎಂ ಸಾಹೇಬರ ಸಹಿ ಮಾಡಿಸುವುದರಲ್ಲಿಯೇ ಅಧಿಕಾರಿಗಳು ತಲ್ಲೀನರಾಗಿದ್ದಾರೆನ್ನುವುದು ಖಾತ್ರಿ.ವರ್ಗಾವಣೆಯ ಪೇಮೆಂಟ್‌ ಕೋಟಾ ನಿಯಂತ್ರಣ ಮಾಡುತ್ತಿರುವ ಆ ʼರಿಮೋಟ್‌ ಕಂಟ್ರೋಲ್‌ʼ ಬಗ್ಗೆ ಜನಕ್ಕೆ ಅರ್ಥವಾಗುತ್ತಿದೆ.ಈ ಕಾಂಡದ ಸರ್ಕಾರ ಬಂದ ಮೊದಲ ದಿನದಿಂದಲೇ ʼಕಾಸಿಗಾಗಿ ಪೋಸ್ಟಿಂಗ್‌ʼ ದಂಧೆ ಶುರುವಾಗಿದೆ
 
 ಸರ್ಕಾರ ಕೆಲಸ ದೇವರ ಕೆಲಸʼ ಎನ್ನುವುದರ ಬದಲು ಬಂದಿದ್ದನ್ನು ಬಿಡದೇ ಬಾಚಿಕೋ ಎಂಬುದು ಈ ಸರ್ಕಾರ ಧ್ಯೇಯನೀತಿ ಆಗಿದೆ.ಜನರ ಹಣೆಗೆ ಗ್ಯಾರಂಟಿ ತುಪ್ಪ ಸವರಿ, ಬಿಟ್ಟಿಭಾಗ್ಯದ ಬೆಲ್ಲದ ಆಮಿಷವೊಡ್ಡಿ.ಲೂಟಿಪರ್ವಕ್ಕೆ ʼಹುಂಡಿʼ ಇಡಲಾಗಿದೆ.ಸಿಎಂ ಸಿದ್ದು,ಯತೀಂದ್ರ ವಿರುದ್ಧ ವಾಸಾಕ್ಷಿಯಾಗಿದೆ ಎಂದು‌ ಮಾಜಿ‌ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Bakrid: ಬಕ್ರೀದ್ ಹಬ್ಬದ ಹಿನ್ನಲೆ, ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ಬದಲು: ಬದಲಿ ಮಾರ್ಗ ಇಲ್ಲಿದೆ

B Dayananda: ಸಿಎಂ ಹೇಳಿದ ತಕ್ಷಣ ಬಿ ದಯಾನಂದ ಸಸ್ಪೆಂಡ್ ಆಗಲ್ಲ, ಅಂತಿಮ ತೀರ್ಮಾನ ಇವರದ್ದೇ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಹವಾಮಾನ ಬದಲಾವಣೆ ಗಮನಿಸಿ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

ಮುಂದಿನ ಸುದ್ದಿ
Show comments