Webdunia - Bharat's app for daily news and videos

Install App

ನೂರಕ್ಕೆ ನೂರರಷ್ಟು ಸರಕಾರ ಭದ್ರ ಎಂದ ಮಾಜಿ ಸಿಎಂ

Webdunia
ಶುಕ್ರವಾರ, 14 ಸೆಪ್ಟಂಬರ್ 2018 (16:35 IST)
ಹೆಚ್.ಡಿ. ಕುಮಾರಸ್ವಾಮಿಯವರನ್ನ 5 ವರ್ಷ ಸಿಎಂ ಆಗಿರಿ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಐದು ವರ್ಷ ನೂರಕ್ಕೆ‌ ನೂರು ಈ ಸರ್ಕಾರ ಸುಭದ್ರವಾಗಲಿದೆ ಎಂದು ಮಾಜಿ ಸಿಎಂ ಹೇಳಿಕೆ ನೀಡಿದ್ದಾರೆ.

ಶ್ರವಣಬೆಳಗೊಳದಲ್ಲಿ ‌ಮಾಜಿ‌ ಮುಖ್ಯಮಂತ್ರಿ ಎಂ. ವೀರಪ್ಪಮೊಯ್ಲಿ ಹೇಳಿಕೆ ನೀಡಿದ್ದು, ಯಾರೋ ಒಬ್ಬರು ಅಥವಾ  
ಇಬ್ಬರಿಂದ ಸರ್ಕಾರ ಉರುಳಿಸಲು ಸಾಧ್ಯವಿಲ್ಲ. ಸಮ್ಮಿಶ್ರ ಸರ್ಕಾರ ಆಪತ್ತಿನಲ್ಲಿದೆ ಎನ್ನೋದು ಕೇವಲ‌ ಊಹಾಪೋಹ.  
ಸರ್ಕಾರ ಉರುಳಿಸಲು ಯತ್ನಿಸುವವರು ನಾಶವಾಗುತ್ತಾರೆ ಎಂದಿದ್ದಾರೆ.

ಬಾಹುಬಲಿ‌ಸ್ವಾಮಿ‌‌ ಮಹಾ ಮಸ್ತಕಾಭಿಷೇಕದ ಕೊನೆ ದಿನದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಹೇಳಿಕೆ ನೀಡಿರುವ ವೀರಪ್ಪ ಮೊಯ್ಲಿ ಅವರು, ಬಿ.ಎಸ್.ಯಡಿಯೂರಪ್ಪ ಈ ಹಿಂದೆ ಬಿಜೆಪಿಗೆ ಶಾಪ ಹಾಕಿ‌ ಹೋಗಿದ್ರು. ನಮ್ಮಪ್ಪನಾಣೆ ಮತ್ತೆಂದು ಬಿಜೆಪಿಗೆ ಅಧಿಕಾರಕ್ಕೆ ಬರೋದಿಲ್ಲ. ಸರ್ಕಾರವನ್ನು ಬೀಳಿಸಲು ಯತ್ನಿಸಿದ್ರೆ ಬಿಜೆಪಿಗೇ ಕೆಟ್ಟ ಹೆಸರು ಬರಲಿದೆ. ವಾಮಾಚಾರದ ಮೂಲಕ ಸರ್ಕಾರ ಬೀಳಿಸಲು ಯತ್ನಿಸಿದ್ರೆ ಅವರಿಗೇ ಒಳ್ಳೆದಾಗೋದಿಲ್ಲ. ನಮ್ಮನ್ನ ಒಡೆಯಲು ಬಿಜೆಪಿಯಿಂದ ಸಾಧ್ಯವಿಲ್ಲ. ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಯಾವುದೇ ಯೋಜನೆ ಕೊಡುಗೆಯಾಗಿ ನೀಡಿಲ್ಲ.
ಕೇವಲ‌ ಚುನಾವಣೆ ಬಂದಾಗಷ್ಟೇ ಕರ್ನಾಟಕ‌ ನೆನಪಾಗುತ್ತೆ ಎಂದು ದೂರಿದ್ದಾರೆ.

ನರೇಂದ್ರ ಮೋದಿ ಓರ್ವ ಸರ್ವಾಧಿಕಾರಿ. ಕೇಂದ್ರ ಸರ್ಕಾರದಲ್ಲಿ ಆಂತರಿಕ‌ ಪ್ರಜಾಪ್ರಭುತ್ವ ಇಲ್ಲ ಎಂದು ಟೀಕೆ
ಮಾಡಿದರು. ಕೇಂದ್ರ ಸರ್ಕಾರ ಐಟಿ ಮತ್ತು ಸಿಬಿಐ ದುರುಪಯೋಗ ಮಾಡಿಕೊಂಡು ವಿಪಕ್ಷಗಳನ್ನ ಬಗ್ಗು ಬಡಿಯುವ ಯತ್ನ ನಡೆಯುತ್ತಿದೆ ಎಂದೂ ಆಕ್ರೋಶ ವ್ಯಕ್ತಪಡಿಸಿದರು.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಯಾನಿಟರಿ ಪ್ಯಾಡ್ ನಲ್ಲೂ ರಾಹುಲ್ ಗಾಂಧಿ ಫೋಟೋ: ಟ್ರೋಲ್ ಆದ ಕಾಂಗ್ರೆಸ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಹ್ಮದಾಬಾದ್ ವಿಮಾನ ಪತನ: ಸಂತ್ರಸ್ತರಿಗೆ ಹಣ ನೀಡಲು ಏರ್ ಇಂಡಿಯಾ ಕಳ್ಳಾಟವಾಡುತ್ತಿದೆಯೇ

ಕೊವಿಡ್ ಲಸಿಕೆಯಿಂದ ಹೃದಯಾಘಾತವಾಗ್ತಿರೋದು ನಿಜಾನಾ: ತಜ್ಞರ ಸಮಿತಿ ವರದಿ ಲೀಕ್

ಹೃದಯದ ಸಮಸ್ಯೆಗೂ ಗ್ಯಾಸ್ಟ್ರಿಕ್ ನೋವಿಗೂ ಇರುವ ವ್ಯತ್ಯಾಸವೇನು ತಿಳಿಯಿರಿ

ಮುಂದಿನ ಸುದ್ದಿ
Show comments