Select Your Language

Notifications

webdunia
webdunia
webdunia
webdunia

ಚಿಕ್ಕಮಗಳೂರಿನ ಕಡೆ ಪ್ರವಾಸ ಕೈಗೊಂಡಿರುವ ಮಾಜಿ ಸಿಎಂ ಸಿದ್ದರಾಮಯ್ಯ

ಚಿಕ್ಕಮಗಳೂರಿನ ಕಡೆ ಪ್ರವಾಸ ಕೈಗೊಂಡಿರುವ ಮಾಜಿ ಸಿಎಂ ಸಿದ್ದರಾಮಯ್ಯ
chikamangaluru , ಶುಕ್ರವಾರ, 19 ಆಗಸ್ಟ್ 2022 (17:59 IST)
ಚಿಕ್ಕಮಗಳೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರವಾಸ ಕೈಗೊಂಡಿದ್ದು, ತಡರಾತ್ರಿಯೇ ಶೃಂಗೇರಿ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಿದರು. ಬಾಸಪುರದಲ್ಲಿರುವ ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ. ಡಿ ರಾಜೇಗೌಡ ನಿವಾಸದಲ್ಲಿ ಬೆಳಿಗ್ಗೆ 8ಕ್ಕೆ ತಿಂಡಿಯನ್ನು ಮುಗಿಸಿ, ನಂತರ ಶೃಂಗೇರಿ ಕ್ಷೇತ್ರದ ಬಾಳೆಹೊನ್ನೂರು, ಕೊಪ್ಪ, ಶೃಂಗೇರಿ ತಾಲ್ಲೂಕಿನ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ತದನಂತರ ಶೃಂಗೇರಿಯಿಂದ ಮೂಡಿಗೆರೆ ಕ್ಷೇತ್ರಗಳಾದ ಹಿರೇಬೈಲು, ಕಳಸ, ಕೊಟ್ಟಿಗೆಹಾರ ಗ್ರಾಮಗಳಿಗೆ ಭೇಟಿ ನೀಡಿದರು. ಬಳಿಕ ಮರಬಿದ್ದು ಇಬ್ಬರು ಮೃತಪಟ್ಟ ಕೊವೆ ಗ್ರಾಮಕ್ಕೆ ಭೇಟಿ ನೀಡಿದರು. ಮೂಡಿಗೆರೆ ಐಬಿಯಲ್ಲಿ ಬೆಳೆಗಾರರೊಂದಿಗೆ ಸಭೆ ನಡೆಸಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಲಿದ್ದಾರೆ, ನಿನ್ನೆ ಮಡಿಕೇರಿ ಘಟನೆ ಬಳಿಕ ಹೆಚ್ಚಿನ ಪೊಲೀಸ್ ಭದ್ರತೆ ನೀಡಲಾಗಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ನಾಯಕರು ಮೊಟ್ಟೆ ಎಸೆದು ಕಪ್ಪು ಬಾವುಟ ಪ್ರದರ್ಶನಕ್ಕೆ ಕಾಂಗ್ರೇಸ್ ನಿಂದ ಸರಣಿ ಟ್ವೀಟ್