Webdunia - Bharat's app for daily news and videos

Install App

ಕಾಂಗ್ರೆಸ್ ಮಾಜಿ ಸಚಿವ ಡಿ.ಬಿ ಇನಾಮ್ದಾರ್ ವಿಧಿವಶ

Webdunia
ಮಂಗಳವಾರ, 25 ಏಪ್ರಿಲ್ 2023 (09:29 IST)
ಬೆಳಗಾವಿ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಡಿ.ಬಿ ಇನಾಮ್ದಾರ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತಡರಾತ್ರಿ ವಿಧಿವಶರಾಗಿದ್ದಾರೆ.
 
ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಡಿ.ಬಿ ಇನಾಮ್ದಾರ್ ಕಳೆದ ಒಂದು ತಿಂಗಳಿನಿಂದಲೂ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ಸಾವನ್ನಪ್ಪಿದ್ದಾರೆ. 

ಇನಾಮ್ದಾರ್ 1983ರಲ್ಲಿ ಜನತಾ ಪಕ್ಷದಿಂದ ಕಿತ್ತೂರು ಕ್ಷೇತ್ರದಿಂದ ಸ್ಪರ್ಧಿಸಿ ಮೊದಲ ಬಾರಿ ಗೆಲುವು ಸಾಧಿಸಿದ್ದರು. 1994 ರಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಈವರೆಗೆ 9 ಚುನಾವಣೆ ಎದುರಿಸಿದ್ದ ಇನಾಮ್ದಾರ್ 1983, 1985 ರಲ್ಲಿ ಜನತಾ ಪಕ್ಷದಿಂದ, 1994, 1999, 2013ರ ಕಾಂಗ್ರೆಸ್ ಪಕ್ಷದಿಂದ ಜಯಗಳಿಸಿದ್ದರು. 1989, 2004, 2008 ಹಾಗೂ 2018 ರಲ್ಲಿ ಸೋಲು ಕಂಡಿದ್ದರು. ಮಾಜಿ ಸಿಎಂ ದಿವಂಗತ ಡಿ.ದೇವರಾಜ ಅರಸು, ಎಸ್.ಎಂ ಕೃಷ್ಣ, ಎಸ್. ಬಂಗಾರಪ್ಪ ಸರ್ಕಾರದಲ್ಲಿ ಸಚಿವರಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments