Webdunia - Bharat's app for daily news and videos

Install App

ಇಂದು ಬಿಜೆಪಿ ದಲಿತ ಸಮಾವೇಶ; ಮಾಜಿ ಐಎಎಸ್ ಕೆ. ಶಿವರಾಮ್ ಸೇರ್ಪಡೆ

Webdunia
ಶುಕ್ರವಾರ, 14 ಅಕ್ಟೋಬರ್ 2016 (12:47 IST)
ವಿಧಾನಸಭಾ ಚುನಾವಣೆಗೆ ಇನ್ನೂ ಒಂದೂವರೆ ವರ್ಷಗಳು ಬಾಕಿ ಇರುವಾಗಲೇ ಪ್ರಮುಖ ಪಕ್ಷಗಳು ಈಗಿನಿಂದಲೇ ಚುನಾವಣೆಗೆ ಸಿದ್ಧಗೊಳ್ಳುತ್ತಿವೆ. ಶತಾಯಗತಾಯ ಈ ಬಾರಿ ರಾಜ್ಯದಲ್ಲಿ ಅಧಿಕಾರವನ್ನು ಪಡೆಯಲೇಬೇಕೆಂದು ಹೊರಟಿರುವ, ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಭಾರತೀಯ ಜನತಾ ಪಕ್ಷ ಅದಕ್ಕಾಗಿ ಭರ್ಜರಿ ತಯಾರಿ ನಡೆಸಿದ್ದು ಮುನಿಸಿಕೊಂಡಿುರುವ ದಲಿತ ಸಮುದಾಯದ ಓಲೈಕೆಗೆ ಮಾಸ್ಟರ್ ಪ್ಲಾನ್ ಮಾಡಿದೆ. ಪಕ್ಷದಲ್ಲಿ ದಲಿತ ನಾಯಕರನ್ನು ಬೆಳೆಸುವ ಯತ್ನ ನಡೆಸಲಾಗುತ್ತಿದೆ. 

ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಬಸವನಗುಡಿ ಮೈದಾನದಲ್ಲಿ  ಬೃಹತ್ ದಲಿತ ಸಮಾವೇಶನ್ನು ಹಮ್ಮಿಕೊಳ್ಳಲಾಗಿದ್ದು, ವಿಶೇಷವೆಂದರೆ ಮಾಜಿ ಐಎಎಸ್ ಅಧಿಕಾರಿ, ಸಿನಿಮಾ ನಟ ಕೆ. ಶಿವರಾಮು ಕಮಲ ಪಾಳಯಕ್ಕೆ ಅಧಿಕೃತವಾಗಿ ಸೇರ್ಪಡೆಯಾಗುತ್ತಿದ್ದಾರೆ. 
 
ಇನ್ನೊಂದೆಡೆ ಕೈ ಹಿರಿಯ ನಾಯಕ, ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರು ಮುಖ್ಯಮಂತ್ರಿ ಸಿದ್ದು ವಿರುದ್ಧ ಸಂಬಂಧವನ್ನು ಕೆಡಿಸಿಕೊಂಡಿರುವ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಹವಣಿಸುತ್ತಿರುವ ಬಿಜೆಪಿ, ಅವರಿಗೂ ಗಾಳ ಹಾಕುತ್ತಿದೆ. ಜೆಡಿಎಸ್ ಕೂಡ ಅವರನ್ನು ಸೆಳೆದುಕೊಳ್ಳಲು ಸರ್ವ ಪ್ರಯತ್ನಗಳನ್ನು ನಡೆಸಿದೆ.
 
ಪ್ರಸಾದ್ ತೆನೆ ಹೊರುತ್ತಾರೋ ಅಥವಾ ಕಮಲವನ್ನು ಮುಡಿಗೇರಿಸಿಕೊಳ್ಳುತ್ತಾರೋ ಅಥವಾ ಬೇರೆ ಯಾವ ನಿರ್ಧಾರವನ್ನು ಕೈಗೊಳ್ಳುತ್ತಾರೋ ಎಂಬುದನ್ನು ಕಾದು ನೋಡಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಭಾರತದ ಭವಿಷ್ಯದ ಬೆಳಕು, ನನ್ನ ಹೆಮ್ಮೆಯ ನಾಯಕ: ಸಿದ್ದರಾಮಯ್ಯ

Arecanut price today: ಅಡಿಕೆ ಬೆಳೆಗಾರರಿಗೆ ಇಂದು ಗುಡ್ ನ್ಯೂಸ್

Gold Price today: ಮತ್ತೆ ಏರಿತು ಚಿನ್ನದ ರೇಟು, ಬೆಳ್ಳಿಯಿಂದಲೂ ದಾಖಲೆ

ಹನಿಮೂನ್ ಹಂತಕಿ ಸೋನಂ ರಘುವಂಶಿಯ ಮತ್ತೊಂದು ಸೀಕ್ರೆಟ್ ಬಯಲು

ನಾನೇನು ಮಾಡ್ತೀನಿ ಎಂದು ಯಾರಿಗೂ ಗೊತ್ತಿಲ್ಲ: ಇರಾನ್ ಗೆ ಡೊನಾಲ್ಡ್ ಟ್ರಂಪ್ ವಾರ್ನ್

ಮುಂದಿನ ಸುದ್ದಿ
Show comments