Webdunia - Bharat's app for daily news and videos

Install App

ಮಾಜಿ ಲವರ್ ಕಾಟ; ಕುಡುಕ ಗಂಡನಿಗೆ ಡಿವೋರ್ಸ್ ಕೊಡುವೆ ಅಂತಿದ್ದಾಳೆ

Webdunia
ಸೋಮವಾರ, 12 ಆಗಸ್ಟ್ 2019 (16:46 IST)
ಪ್ರಶ್ನೆನನ್ನ ಗೆಳತಿಯೊಂದಿಗೆ ನನ್ನ ಕಾಮದಾಟ ಒಂದೆರಡು ವರ್ಷ ನಡೆದಿದೆ. ಅವರ ಮನೆಯಲ್ಲಿ ನನ್ನ ಜತೆ ಮದುವೆ ಮಾಡಿಕೊಡುವುದಕ್ಕೆ ನಿರಾಕರಿಸಿದ್ದಾರೆ.  ನನ್ನ ವಿರುದ್ಧ ಗರಂ ಆದ ಆಕೆಯ ಮನೆಯವರು ಯಾರಿಗೂ ತಿಳಿಯದಂತೆ ನನ್ನ ಪ್ರೇಯಸಿಯನ್ನು ಬೇರೆ ಹುಡುಗನಿಗೆ ಕೊಟ್ಟು ಮದುವೆ ಮಾಡಿಬಿಟ್ರು. ಇದಾಗಿ ಐದು ವರ್ಷಗಳೇ ಕಳೆಯುತ್ತಿವೆ. ಆಕೆಗೆ ಮಗು ಆಗಿಲ್ಲ.

ಹೀಗಾಗಿ ನನ್ನ ನಂಬರ್ ಪಡೆದಿರುವ ಅವಳು ಕರೆ ಮಾಡಿ ನಾನು ನನ್ನ ಗಂಡನನ್ನು ಬಿಡುತ್ತೇನೆ. ನನ್ನ ಮಗುವಿಗೆ ನಿನೇ ತಂದೆಯಾಗು ಅಂತಿದ್ದಾಳೆ. ನನಗೆ ಮದುವೆಯಾಗಿ ಎರಡು ಮಕ್ಕಳಿದ್ದಾರೆ. ಮಾಡೋದೇನು?  

ಉತ್ತರ: ನೀವು ಯೌವನದಲ್ಲಿ ಪರಸ್ಪರ ಆಕರ್ಷಣೆಗೆ ಒಳಗಾಗಿ ವಯೋಸಹಜವಾಗಿ ಪ್ರೀತಿ ಮಾಡಿರಬಹುದು. ಅಥವಾ ನಿಮ್ಮದು ನಿಜವಾದ ಪ್ರೀತಿಯೇ ಆಗಿರಬಹುದು. ಆದರೆ ನಿಮ್ಮ ಪ್ರೇಯಸಿಗೆ ನಿಮಗಿಂತ ಐದಾರು ವರ್ಷ ಮೊದಲೇ ಮದುವೆಯಾಗಿದೆ. ನೀವು ಕೂಡ ಮದುವೆಯಾಗಿ ಮುದ್ದಾದ ಮಕ್ಕಳ ತಂದೆಯಾಗಿದ್ದೀರಿ. ಮದುವೆ ಆಗುವುದಕ್ಕೂ ಮೊದಲೇ ಆಕೆ ನಿಮ್ಮನ್ನು ಮನೆಯವರ ವಿರೋಧದ ನಡುವೆಯೂ ಮದುವೆಯಾಗಬಹುದಿತ್ತು. ಆದರೆ ಹಾಗೆ ಮಾಡಿಲ್ಲ. ಕಾರಣ ಏನೇ ಇರಬಹುದು. ಅದು ಈಗ ಬೇಡ. ನಿಮಗೂ ಮಡದಿ, ಮಕ್ಕಳಿದ್ದಾರೆ. ಆಕೆಯ ಗಂಡನ ಕುಡಿತದಿಂದಾಗಿ ಆಕೆ ಮಾನಸಿಕ ಹಾಗೂ ದೈಹಿಕ ಹಿಂಸೆ ಅನುಭವಿಸುತ್ತಿದ್ದಾಳೆ.

ಆಕೆಯ ಗಂಡ ನಿಮ್ಮ ಪ್ರೇಯಸಿಗೆ ಹೊಡೆಯುತ್ತಿದ್ದಾನೆ ಎಂದೆಲ್ಲ ತಿಳಿಸಿದ್ದೀರಿ. ಒಂದು ವೇಳೆ ನಿಮ್ಮ ಮೊದಲಿನ ಪ್ರೇಯಸಿಗೆ ಉತ್ತಮ ಗಂಡ ಸಿಕ್ಕಿದ್ದು, ಶ್ರೀಮಂತನಾಗಿದ್ದರೆ, ಅವಳನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದರೆ ಆಗ ನಿಮ್ಮ ನೆನಪು ಆಗುತ್ತಿತ್ತಾ? ಒಮ್ಮೆ ಯೋಚಿಸಿ. ಮೊದಲಿನ ಪ್ರೀತಿಯನ್ನು ಮರೆತು ಬಿಡಿ. ಇದರಿಂದ ಅನಾಹುತಗಳೇ ಹೆಚ್ಚು. ನಿಮ್ಮ ಪತ್ನಿ, ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

ಮುಂದಿನ ಸುದ್ದಿ
Show comments