Webdunia - Bharat's app for daily news and videos

Install App

ಎಚ್‍ಡಿಡಿ ಯು ಟರ್ನ್ ರಾಜಕಾರಣಿ ಎಂದು ಮಾಜಿ ಸಚಿವ ಎ ಮಂಜು ಹೇಳಿದ್ಯಾಕೆ?

Webdunia
ಮಂಗಳವಾರ, 5 ಮಾರ್ಚ್ 2019 (07:23 IST)
ಹಾಸನ : ಎಚ್‍ಡಿಡಿ ಅವರು ಯು ಟರ್ನ್ ರಾಜಕಾರಣಿಗಳಲ್ಲಿ ಮೊದಲಿಗರಾಗಿದ್ದು, ಐದು ಬಾರಿ ಸ್ಪರ್ಧೆ ಮಾಡಲ್ಲ ಎಂದು ಹೇಳಿ ಮಾಡಿದ್ದಾರೆ ಎಂದು ಮಾಜಿ ಸಚಿವ ಎ ಮಂಜು ಕಿಡಿಕಾರಿದ್ದಾರೆ.


ದೇಶದಲ್ಲಿ ಇಂದಿರಾ ಗಾಂಧಿ ಕುಟುಂಬ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ಅವರನ್ನ ವಿರೋಧ ಮಾಡುತ್ತ ಎಚ್‍.ಡಿ ದೇವೇಗೌಡರು ಇಂದು ತಮ್ಮ ಕುಟುಂಬದವರಿಗೆ ಟಿಕೆಟ್ ನೀಡುತ್ತಿರುವುದು ಎಷ್ಟು ಸರಿ? ದೇವೇಗೌಡರು ಮಕ್ಕಳು ಮತ್ತು ಸೊಸೆ ಬಗ್ಗೆ ಚಿಂತನೆ ಮಾಡುತ್ತಿದ್ದಾರೆ. ಆದರೆ ಪಕ್ಷದಲ್ಲಿ ಇರುವ 2ನೇ ಹಂತದ ನಾಯಕರ ಗತಿ ಏನು? ಎಂದು ಪ್ರಶ್ನಿಸಿದ್ದಾರೆ.


ಅಲ್ಲದೇ ಮೈತ್ರಿ ಧರ್ಮದಲ್ಲಿ ಹಾಸನ ಹಾಗೂ ಮಂಡ್ಯ ಎರಡರಲ್ಲಿ ಒಂದು ನಮಗೆ ಕೊಡಬೇಕು. ಆದರೆ ಈ ಬಗ್ಗೆ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ ಆಗದೆ ಸಚಿವ ಸಾರಾ ಮಹೇಶ್ ಅಭ್ಯರ್ಥಿ ಘೋಷಣೆ ತಪ್ಪು. ಮಂಡ್ಯ ಕ್ಷೇತ್ರವನ್ನು ಅಂಬರೀಶ್ ಕುಟುಂಬಕ್ಕೆ ಬಿಟ್ಟು ಕೊಡಲು ಒತ್ತಾಯ ಮಾಡುತ್ತೇವೆ. ಸುಮಲತಾ ಅವರೇ ಅಭ್ಯರ್ಥಿ ಮಾಡಬೇಕು ಎಂಬುವುದು ನಮ್ಮ ಒತ್ತಾಯ. ನಾನು ಹಾಸನ ಬಿಟ್ಟು ಎಲ್ಲಿಯೂ ಹೋಗಲ್ಲ. ದೇವೇಗೌಡರ ಸ್ಪರ್ಧೆ ನೋಡಿಕೊಂಡು ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mysore Sandal Soap: ವಿರೋಧದ ಬೆನ್ನಲ್ಲೇ ತಮನ್ನಾ ಆಯ್ಕೆ ಹಿಂದಿನಿ ಕಾರಣ ಬಿಚ್ಚಿಟ್ಟ ಸಚಿವ ಎಂಬಿ ಪಾಟೀಲ್‌

Viral Video: ಹಾನಗಲ್ ಗ್ಯಾಂಗ್ ರೇಪ್ ಪ್ರಕರಣ: ಜಾಮೀನಿನ ಮೇಲೆ ಬಿಡುಗಡೆಯಾದ ಆರೋಪಿಗಳ ರೋಡ್ ಶೋ

Viral video: ತಿರುಪತಿ ದೇವಾಲಯದಲ್ಲೇ ನಮಾಜ್ ಮಾಡಿದ ಮುಸ್ಲಿಂ ವ್ಯಕ್ತಿ

Arecanut price today: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಮತ್ತಷ್ಟು ಬೆಲೆ ಏರಿಕೆ

Gold Price today: ಮತ್ತೆ ಲಕ್ಷದತ್ತ ಚಿನ್ನದ ದರ

ಮುಂದಿನ ಸುದ್ದಿ
Show comments