Webdunia - Bharat's app for daily news and videos

Install App

ಮಂಗಳೂರು ಘಟನೆ ಖಂಡಿಸಿದ ಮಾಜಿ ಸಚಿವ ಜಿ ಪರಮೇಶ್ವರ್

Webdunia
ಭಾನುವಾರ, 20 ನವೆಂಬರ್ 2022 (20:17 IST)
ಮಂಗಳೂರು ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಸೂಕ್ತ ತನಿಖೆಯನ್ನು ನಡೆಸಬೇಕು ಎಂದು ಮಾಜಿ ಗೃಹ ಸಚಿವ ಜಿ ಪರಮೇಶ್ವರ್ ಒತ್ತಾಯಿಸಿದ್ದಾರೆ.ಬೆಂಗಳೂರರಿನ ಖಾಸಗಿ ಹೋಟೆಲ್ ನಲ್ಲಿ ಮಾತಾಡಿದ ಅವರು,ಮಂಗಳೂರಿನಲ್ಲಿ ಈ ಹಿಂದೆ ಇಂತಹ ಘಟನೆಗಳು ನಡೆದಿದ್ದವು. ಗೃಹ ಇಲಾಖೆ ಈ ಬಗ್ಗೆ ಗಂಭೀರವಾಗಿ ತನಿಖೆ ನಡೆಸಿ ಎನ್ಐಎಗೆ ಪ್ರಕರಣವನ್ನು ಒಪ್ಪಿಸಬೇಕು ಎಂದರು.ಇನ್ನು ಇದೆ ವೇಳೆ ಚಿಲುಮೆ ಸಂಸ್ಥೆಗೆ ಕಾಂಗ್ರೆಸ್‌ನವರೇ ಅನುಮತಿ ಕೊಟ್ಟಿದ್ದರು ಎಂಬ ಸಿಎಂ ಬೊಮ್ಮಾಯಿ ಹೇಳಿಕೆಗೆ ಪ್ರತಿಕ್ರಿಯಿಸಿ, ಬಿಜೆಪಿಯವರಿಗೆ ಇದೊಂದು ಕಾಯಿಲೆಯಾಗಿದೆ. ಏನೇ ಆರೋಪ ಮಾಡಿದರೂ, ಕಾಂಗ್ರೆಸ್‌ನವರೂ ಮಾಡಿಲ್ವಾ ಎಂದು ಕೇಳುತ್ತಾರೆ. ಈ ಬಗ್ಗೆ ಸಂಪೂರ್ಣ ತನಿಖೆ ಆಗಲಿ ಎಂದೇ ನಾವು ಚುನಾವಣಾ ಆಯೋಗಕ್ಕೆ ದೂರು ಕೊಟ್ಟಿದ್ದೇವೆ. ಎಲ್ಲದರ ಬಗ್ಗೆಯೂ ತನಿಖೆ ನಡೆಸಿದರೆ ಸತ್ಯಾಂಶ ಹೊರ ಬರಲಿದೆ. ತಮಗೆ ಬೇಕಾದಂತೆ ಮತದಾರರ ಹೆಸರು ಡಿಲೀಟ್ ಮಾಡುವುದು, ಮತದಾರರ ಪಟ್ಟಿ ಬದಲಾಯಿಸುವುದು ಬಿಜೆಪಿ ಮಾಡುತ್ತಿದೆ ಎಂದು ಜಿ ಪರಮೇಶ್ವರ್ ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments