Select Your Language

Notifications

webdunia
webdunia
webdunia
webdunia

ಮಾಜಿ ಸಚಿವ ಎಚ್.ವೈ. ಮೇಟಿ ರಾಸಲೀಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್

ಮಾಜಿ ಸಚಿವ ಎಚ್.ವೈ. ಮೇಟಿ ರಾಸಲೀಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್
ಬಾಗಲಕೋಟೆ , ಗುರುವಾರ, 17 ಆಗಸ್ಟ್ 2017 (19:46 IST)
ಮಾಜಿ ಸಚಿವ ಎಚ್.ವೈ.ಮೇಟಿ ರಾಸಲೀಲೆ ಪ್ರಕರಣಕ್ಕೆ ಹೊಸತಂದು ಟ್ವಿಸ್ಟ್ ದೊರೆತಿದೆ. ಮೇಟಿ ರಾಸಲೀಲೆ ಪ್ರಕರಣದ ಸಿಡಿಯಲ್ಲಿರುವವಳು ನಾನೇ ಎಂದು ಸಂತ್ರಸ್ಥ ಮಹಿಳೆ ವಿಜಯಲಕ್ಷ್ಮಿ ಇದೀಗ ಉಲ್ಟಾ ಹೊಡೆದಿದ್ದಾಳೆ.
ಸಂತ್ರಸ್ಥ ಮಹಿಳೆಯ ಹೇಳಿಕೆಯಿಂದಾಗಿ ಪ್ರಕರಣಕ್ಕೆ ಹಠಾತ್ ಹೊಸ ತಿರುವು ದೊರೆತಿದೆ. ಇದೀಗ ಮಹಿಳೆ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ್ದಾಳೆ.
 
ಕಳೆದ ಕೆಲವು ತಿಂಗಳುಗಳ ಹಿಂದೆ ಸಿಡಿಯಲ್ಲಿರುವ ಮಹಿಳೆ ನಾನಲ್ಲ ಎಂದು ಸಂತ್ರಸ್ಥ ಮಹಿಳೆ ಬಹಿರಂಗವಾಗಿ ಹೇಳಿಕೆ ನೀಡಿದ್ದಳು. ಇದೀಗ ಸಿಡಿಯಲ್ಲಿರುವವಳು ನಾನೇ, ಮಾಜಿ ಸಚಿವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ದೂರು ನೀಡಿದ್ದಾಳೆ.   
 
ಕೆಲ ದಿನಗಳ ಹಿಂದೆ ಮಾಜಿ ಸಚಿವ ಮೇಟಿ ಬೆಂಬಲಿಗರು ಜೀವ ಬೆದರಿಕೆ ಹಾಕಿದ್ದರಿಂದ ಆತ್ಮಹತ್ಯೆಗೆ ಪ್ರಯತ್ನಿಸಿದ್ದೇನೆ ಎಂದು  ನೀಡಿರುವ ಹೇಳಿಕೆ ಮಾಸುವ ಮುನ್ನವೇ ಸಂತ್ರಸ್ಥೆ ಹೊಸ ಬಾಂಬ್ ಸಿಡಿಸಿದ್ದಾಳೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಜಯಲಲಿತಾ ಸಾವಿನ ಬಗ್ಗೆ ತನಿಖೆಗೆ ಆದೇಶಿಸಿದ ಸಿಎಂ ಪಳನಿಸ್ವಾಮಿ