Select Your Language

Notifications

webdunia
webdunia
webdunia
webdunia

'ಕೈ'ಗೆ ಬೈ ಬೈ ಹೇಳಿದ ಕುಮಾರ್ ಬಂಗಾರಪ್ಪ

'ಕೈ'ಗೆ  ಬೈ ಬೈ ಹೇಳಿದ ಕುಮಾರ್ ಬಂಗಾರಪ್ಪ
ಬೆಂಗಳೂರು , ಶುಕ್ರವಾರ, 3 ಮಾರ್ಚ್ 2017 (14:30 IST)
ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಪುತ್ರ ಕುಮಾರ್ ಬಂಗಾರಪ್ಪ ಇಂದು ಅಧಿಕೃತವಾಗಿ ಕಾಂಗ್ರೆಸ್‌ಗೆ ವಿದಾಯ ಹೇಳಿದ್ಗಾರೆ. 

ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ತಾವು ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿರುವುದನ್ನು ಖಚಿತ ಪಡಿಸಿದರು. 
 
21 ವರ್ಷಗಳ ಕಾಂಗ್ರೆಸ್ ಜತೆಗಿನ ಸಂಬಂಧವನ್ನು ನಾನಿಂದು ಕಡಿದುಕೊಂಡಿದ್ದೇನೆ. ರಾಜೀನಾಮೆ ಪತ್ರವನ್ನು ಕೆಪಿಸಿಸಿ ಅಧ್ಯಕ್ಷರಿಗೆ ಕಳುಹಿಸುತ್ತಿದ್ದೇನೆ. ಎಂದು ಕುಮಾರ್ ಬಂಗಾರಪ್ಪ ಹೇಳಿದ್ದಾರೆ.
 
ಪಕ್ಷ ತೊರೆಯಲು ನೋವಾಗುತ್ತಿದೆ. ಆದರೆ ನಾನು ತೆಗೆದುಕೊಂಡ ನಿರ್ಧಾರ ಉತ್ತಮವಾದುದು ಎಂಬ ವಿಶ್ವಾಸವಿದೆ, ನಾನು ಸಾಧಾರಣ ಕಾರ್ಯಕರ್ತನಾಗಿ ಪಕ್ಷಕ್ಕೆ ಸೇರುತ್ತಿದ್ದೇನೆ. ಯಾವುದೇ ಟಿಕೆಟ್ ಬೇಡಿಕೆ ಇಟ್ಟಿಲ್ಲ ಎಂದು ಕುಮಾರ್ ಬಂಗಾರಪ್ಪ ತಿಳಿಸಿದರು.
 
ಇದೇ ಬರುವ 9ನೇ ತಾರೀಖಿನಂದು ಕುಮಾರ್ ಬಂಗಾರಪ್ಪ ಬಿಜೆಪಿ ಸೇರಲಿದ್ದಾರೆ, ಎಂದು ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಈಶ್ವರಪ್ಪ ಹೇಳಿದ್ದಾರೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಎಸಿಬಿ ಬಲೆಗೆ ಮತ್ತೊಂದು ತಿಮಿಂಗಿಲ: ಅಪಾರ ಪ್ರಮಾಣದ ಆಸ್ತಿ ಪತ್ತೆ