Webdunia - Bharat's app for daily news and videos

Install App

ಆಸ್ಪತ್ರೆಗೆ ದಾಖಲಾದ ಗಣಿ ಧಣಿ ಜನಾರ್ಧನ್ ರೆಡ್ಡಿ

Webdunia
ಶುಕ್ರವಾರ, 25 ಜುಲೈ 2014 (12:14 IST)
ಅಕ್ರಮ ಗಣಿ ಹಗರಣದ ಆರೋಪದಡಿಯಲ್ಲಿ  ಪರಪ್ಪನ ಅಗ್ರಹಾರದಲ್ಲಿ ಕಾರಾಗೃಹವಾಸವನ್ನು ಅನುಭವಿಸುತ್ತಿರುವ ಮಾಜಿ ಸಚಿವ, ಗಣಿ ಧಣಿ ಜನಾರ್ಧನ ರೆಡ್ಡಿ ತೀವೃ ಬೆನ್ನು ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. 

ಕಳೆದ ರಾತ್ರಿ ಗಂಭೀರ ನೋವಿನಿಂದ ಬಳಲುತ್ತಿದ್ದ ಅವರನ್ನು ಅವರನ್ನು ನಗರದ ಹೆಬ್ಬಾಳದಲ್ಲಿರುವ ಕೊಲಂಬಿಯಾ ಏಶಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು  ವರದಿಯಾಗಿದೆ. 
 
ಪದೇ ಪದೇ ಬೆನ್ನು ನೋವಿನಿಂದ ಬಳಲುತ್ತಿರುವ ಅವರು ಈ ರೀತಿ ಆಸ್ಪತ್ರೆಗೆ ದಾಖಲಾಗುತ್ತಿರುವುದು ನಾಲ್ಕನೇ ಬಾರಿ. 
 
ಅಕ್ರಮ ಗಣಿಗಾರಿಕೆ ಆರೋಪದ ಮೇಲೆ ಬಂಧಿತರಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿತ್ತು .
 
ರೆಡ್ಡಿ ಜಾಮೀನು ಅರ್ಜಿಯನ್ನು ಪರಿಶೀಲಿಸಿದ ಕೋರ್ಟ್, ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಸಿಬಿಐ ತನಿಖೆ ನಡೆಯುತ್ತಿರುವುದರಿಂದ ಜಾಮೀನು ನೀಡಲು ಬರುವುದಿಲ್ಲ ಎಂದಿತ್ತಲ್ಲದೇ, ಮೂರು ತಿಂಗಳ ತರುವಾಯ ಜಾಮೀನು ಅರ್ಜಿ ಸಲ್ಲಿಸುವಂತೆ ರೆಡ್ಡಿಯವರಿಗೆ ಸೂಚನೆ ನೀಡಿತ್ತು
 
ಜಾಮೀನು ಸಿಗಬಹುದೆಂಬ ವಿಶ್ವಾಸದಲ್ಲಿದ್ದ ರೆಡ್ಡಿ ಇದರಿಂದ ತೀವೃ ನಿರಾಸೆಗೊಳಗಾಗಿದ್ದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments