ಮಾಜಿ ಸಚಿವೆ ಮೋಟಮ್ಮ ಪತಿಯಿಂದ ಬಡ ರೈತ ಕುಟುಂಬದ ಜಮೀನು ಕಬಳಿಸಲು ಹುನ್ನಾರ?

Webdunia
ಬುಧವಾರ, 5 ಸೆಪ್ಟಂಬರ್ 2018 (15:01 IST)
ಮಾಜಿ ಸಚಿವೆ ಹಾಗೂ ಕಾಂಗ್ರೆಸ್ ನಾಯಕಿ ಮೋಟಮ್ಮ ಪತಿ ವೆಂಕಟರಾಮು ಎನ್ನುವವರು ಬಡ ರೈತ ಕುಟುಂಬದ ಜಮೀನು ಕಬಳಿಸಲು ಹುನ್ನಾರ ನಡೆಸಿರುವ ಆರೋಪ ಮಂಡ್ಯದಲ್ಲಿ ಕೇಳಿ ಬಂದಿದೆ.

ಕ್ರಿಮಿನಲ್ ಪ್ರಕರಣವೊಂದರಲ್ಲಿ ರಾಜಿಯಾಗದಿದ್ದರೆ ನಿಮ್ಮ ಜಮೀನು ವಶಪಡಿಸಿಕೊಳ್ಳುವ ಬೆದರಿಕೆ ಹಾಕಿದ್ದು, ಮೋಟಮ್ಮ ಕುಟುಂಬದ ಬೆದರಿಕೆಯಿಂದ ಕುಟುಂಬವೊಂದು ದಯಾಮರಣಕ್ಕೆ ಅಂಗಲಾಚಿದೆ. ತನ್ನ ಸಂಬಂಧಿಗಳು ಆರೋಪಿಗಳಾಗಿರುವ ಕ್ರಿಮಿನಲ್ ಪ್ರಕರಣವೊಂದನ್ನು ರಾಜಿ ಮಾಡಿಸಿಕೊಳ್ಳಬೇಕು. ಇಲ್ಲದಿದ್ದರೆ ತೋಟಿ ಇನಾಮ್ತಿಯಲ್ಲಿ ಜಮೀನು ಮಂಜೂರಾಗಿದ್ದು, ಜಂಟಿ ಖಾತೆಯಲ್ಲಿರುವ ಜಮೀನಿನಲ್ಲಿ ಬೇಸಾಯಕ್ಕೆ ಅವಕಾಶ ಕೊಡಲ್ಲ ಎಂದು ಮಾಜಿ ಸಚಿವೆ ಹಾಗೂ ಕಾಂಗ್ರೆಸ್ ನಾಯಕಿ ಮೋಟಮ್ಮ ಪತಿ ವೆಂಕಟರಾಮು ತಮ್ಮ ಸಹೋದರ ಸಂಬಂಧಿ ನಾಗರಾಜು ಕುಟುಂಬಕ್ಕೆ ಕಿರುಕುಳ ಕೊಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಇಂಥದ್ದೊಂದು ಪ್ರಕರಣ ಮಂಡ್ಯ ತಾಲ್ಲೂಕಿನ ಕೀಲಾರ ಗ್ರಾಮದಲ್ಲಿ ನಡೆದಿದ್ದು, ಮಾಜಿ ಸಚಿವೆ ಮೋಟಮ್ಮ ಅವರ ಪತಿ ವೆಂಕಟರಾಮು ತಮಗೆ ಕಿರುಕುಳ ಕೊಡ್ತಿದ್ದಾರೆ. ಹೀಗಾಗಿ ದಯಾ ಮರಣ ನೀಡಿ  ಎಂದು ವೆಂಕಟರಾಮು ಅವರ ದಾಯಾದಿ ಕುಟುಂಬದ ಎಸ್.ನಾಗರಾಜು, ಪತ್ನಿ ಚಂದ್ರಮ್ಮ ಹಾಗೂ ಪುತ್ರ ಶಿವಶಂಕರ್ ಮಾಧ್ಯಮಗಳ ಮುಂದೆ ತಮ್ಮ ಅಳಲು ತೋಡಿಕೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಮದುವೆ ಸಂಭ್ರಮಾಚರಣೆ ವೇಳೆ ಹೈಡ್ರೋಜನ್ ಬಲೂನ್ ಸ್ಪೋಟ: ವಧು ವರರ ಕತೆ ಏನಾಯ್ತು

ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಡಿಕೆ ಶಿವಕುಮಾರ್: ಭಾರೀ ಕುತೂಹಲ ಮೂಡಿಸಿದ ನಡೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಈ ಒಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವು

ಮುಂದಿನ ಸುದ್ದಿ
Show comments