Select Your Language

Notifications

webdunia
webdunia
webdunia
webdunia

ಬಿಜೆಪಿಯಲ್ಲಿ ಯಡಿಯೂರಪ್ಪ ರಬ್ಬರ್‌ ಸ್ಟಾಂಪ್‌ ಎಂದ ಮಾಜಿ ಸಚಿವ

ಬಿಜೆಪಿಯಲ್ಲಿ ಯಡಿಯೂರಪ್ಪ ರಬ್ಬರ್‌ ಸ್ಟಾಂಪ್‌ ಎಂದ ಮಾಜಿ ಸಚಿವ
ಬೆಂಗಳೂರು , ಸೋಮವಾರ, 15 ಜನವರಿ 2018 (19:52 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿ ಪಕ್ಷದಲ್ಲಿ ರಬ್ಬರ್ ಸ್ಟ್ಯಾಂಪ್ ಆಗಿದ್ದಾರೆ ಎಂದು ಜೆಡಿಎಸ್ ಪಕ್ಷ ಸೇರ್ಪಡೆಯಾದ ಬಿಜೆಪಿಯ ಮಾಜಿ ಸಚಿವ ಆನಂದ ಅಸ್ನೋಟಿಕರ್ ವ್ಯಂಗವಾಡಿದ್ದಾರೆ.

ಬೆಂಗಳೂರಿನ ದೇವೇಗೌಡ ನಿವಾಸದಲ್ಲಿ ಜೆಡಿಎಸ್ ಸೇರ್ಪಡೆಯಾದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ನಾಯಕರು ಅಸ್ತಿತ್ವ ಕಳೆದುಕೊಂಡಿದ್ದಾರೆ. ಏನೇ ಕೇಳಿದರೂ ಅಮಿತ್‌ ಶಾ ಅವರ ಹೆಸರು ಹೇಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.
 
ರಾಜ್ಯದಲ್ಲಿ ಬಿ.ಎಸ್‌.ಯಡಿಯೂರಪ್ಪ, ಶೋಭಾ ಕರಂದ್ಲಾಜೆ ಹಾಗೂ ಕೇಂದ್ರ ಸಚಿವ ಅನಂತಕುಮಾರ್ ಅವರು ಬಿಜೆಪಿ ಪಕ್ಷದಲ್ಲಿ ಬೇರೆ ನಾಯಕರನ್ನು ಬೆಳೆಯಲು ಬಿಡುತ್ತಿಲ್ಲ. ಎಲ್ಲ ವೇದಿಕೆಯಲ್ಲೂ ಅವರೇ ಇರುತ್ತಾರೆ. ಅನಂತ ಕುಮಾರ್‌ ಅವರನ್ನು ಎದುರಿಸಲು ಯಾರಿಂದಲೂ ಸಾಧ್ಯವಿಲ್ಲ. ಅವರ ಬಗ್ಗೆ ಹೆಚ್ಚಿನದ್ದನ್ನು ಈಗ ಹೇಳಲಾರೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಹನುಮಾನ್‌ ಮಂದಿರಕ್ಕೆ ಭೇಟಿಯ ಮೂಲಕ ರಾಹುಲ್‌ಗಾಂಧಿ ಪ್ರವಾಸ ಆರಂಭ