Webdunia - Bharat's app for daily news and videos

Install App

ಮೈತ್ರಿ ಸರಕಾರದವರು ಹನಿಮೂನ್ ಸಮಯದಲ್ಲಿ ಡಿವೋರ್ಸಗೆ ಹೋಗಿದ್ದಾರೆಂದ ಮಾಜಿ ಸಚಿವ

Webdunia
ಬುಧವಾರ, 31 ಅಕ್ಟೋಬರ್ 2018 (15:25 IST)
ರಾಜ್ಯದಲ್ಲಿ ಈ ಹಿಂದಿನ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯವನ್ನು ಜನರು ನೋಡಿದ್ದಾರೆ. ಜೆಡಿಎಸ್ -ಕಾಂಗ್ರೆಸ್ ಸರಕಾರದ ಅಪವಿತ್ರ ಮೈತ್ರಿಯಿಂದ ಅಭಿವೃದ್ಧಿಯಾಗಿಲ್ಲ. ಮೈತ್ರಿ ಸರಕಾರ ಹನಿಮೂನ್ ಸಮಯದಲ್ಲಿ ಡಿವೋರ್ಸ್ ಗೆ ಹೋಗಿದ್ದಾರೆ. ಇದರಿಂದ  ಜನ ಬೇಸತ್ತಿದ್ದಾರೆ ಎಂದು ಮಾಜಿ ಸಚಿವ ಆರೋಪ ಮಾಡಿದ್ದಾರೆ.

ಬಳ್ಳಾರಿ ಲೋಕಸಭೆ ಉಪಚುನಾವಣೆ ಹಿನ್ನೆಲೆ  ಮಾಜಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಸುದ್ದಿಗೋಷ್ಠಿ ನಡೆಸಿದ್ದಾರೆ.  ಈ ಚುನಾವಣೆಯಲ್ಲಿ ಬಿಜೆಪಿ ಗೆಲ್ತದೆ. ದಿನದಿಂದ ದಿನಕ್ಕೆ ವಿಶ್ವಾಸ  ಹೆಚ್ಚಾಗುತ್ತಿದೆ. 5 ಕ್ಷೇತ್ರಗಳಲ್ಲಿ ಗೆಲ್ಲುವ ವಾತಾವರಣ ಇದೆ ಎಂದರು.

 ಪ್ರಧಾನಿ ಮೋದಿಯವರ ಕೊಡುಗೆ ಹೆಚ್ಚಿದೆ. ಈ ಕಾರಣಕ್ಕೆ ಬಿಜೆಪಿಯನ್ನು ಜನ ಬೆಂಬಲಿಸುತ್ತಿದ್ದಾರೆ. ಎಲ್ಲರೂ ಮೋದಿ ಅಂತಾರೆ, ಪ್ರಶ್ನಾತೀತ ನಾಯಕನಾಗಿ ಬೆಳೆಯುತ್ತಿದ್ದಾರೆ ಎಂದರು.

ರಾಜ್ಯ ಸರಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಕಾಗೇರಿ,  ಬಡವರ ಪರ, ರೈತರ ಪರ ಮೊಸಳೆ ಕಣ್ಣೀರು ಹಾಕ್ತಿದ್ದಾರೆ ಸಿಎಂ ಕುಮಾರಸ್ವಾಮಿ. ಅಭಿವೃದ್ಧಿ ಕೆಲಸಕ್ಕೆ ಹಣ ಬಿಡುಗಡೆಯಾಗ್ತಿಲ್ಲ. ಅತಿವೃಷ್ಠಿ, ಅನಾವೃಷ್ಠಿಗೆ ಹಣ ಬಿಡುಗಡೆ ಮಾಡ್ತಿಲ್ಲ. ಶಿಕ್ಷಣ ಇಲಾಖೆಯಲ್ಲಿ ಸಾಕಷ್ಟು ಗೊಂದಲವಾಗುತ್ತಿವೆ. ಶಿಕ್ಷಣ ಇಲಾಖೆಯ ಚಟುವಟಿಕೆ ಏನು ಅಂತಾನೇ ಗೊತ್ತಿಲ್ಲ ಎಂದು ಟೀಕೆ ಮಾಡಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇರಾನ್‌ನಿಂದ 290 ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ವಾಪಾಸ್‌, ಮೂರು ಹಂತದಲ್ಲಿ ಕಾರ್ಯಚರಣೆ

ಇಸ್ರೇಲ್‌ನಲ್ಲಿರುವ ಭಾರತೀಯರು ತಾಯ್ನಾಡಿಗೆ ವಾಪಾಸ್ಸಾಗಬೇಕೇ, ಸರ್ಕಾರ ಏನ್ ಹೇಳ್ತಿದೆ

ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಮಾಡಿರುವ ಜಮೀರ್ ರಾಜೀನಾಮೆ ಕೊಡಬೇಕು: ಎನ್ ರವಿಕುಮಾರ್

ವಿಮಾನ ದುರಂತ ಬೆನ್ನಲ್ಲೇ ಏರ್‌ಇಂಡಿಯಾದ 3 ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಡಿಜಿಸಿಎ

Video: ತಮಿಳುನಾಡು ಗವರ್ನರ್ ರವಿ ವಯಸ್ಸು 70 ದಾಟಿದ್ರೂ ಏನು ಎನರ್ಜಿ

ಮುಂದಿನ ಸುದ್ದಿ
Show comments