Webdunia - Bharat's app for daily news and videos

Install App

ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಮಗನ ಆಸ್ತಿಗೂ ತಟ್ಟಿದ ವಕ್ಫ್‌ ಕಂಟಕ

sampriya
ಗುರುವಾರ, 31 ಅಕ್ಟೋಬರ್ 2024 (12:10 IST)
Normal 0 false false false EN-US X-NONE X-NONE MicrosoftInternetExplorer4
photo credit X

ಚಿಕ್ಕೋಡಿ: ರೈತರ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಿದ್ದಕ್ಕೆ ಬಿಜೆಪಿ ನಾಯಕರು ಆಕ್ರೋಶ ಹೊರಹಾಕುತ್ತಿದ್ದು, ಇದೀಗ ಮಾಜಿ ಹಜ್ ಮತ್ತು ವಕ್ಫ್ ಬೋರ್ಡ್ ಸಚಿವೆ ಶಶಿಕಲಾ ಜೊಲ್ಲೆ ಕುಟುಂಬಕ್ಕೆ ವಕ್ಫ್ ಬೋರ್ಡ್ ಶಾಕ್ ನೀಡಿದೆ. ಜೊಲ್ಲೆ ದಂಪತಿಯ ಕಿರಿಯ ಪುತ್ರನಿಗೆ ಸೇರಿದ ಜಮೀನಿನ ಪಹಣಿ ಪತ್ರದಲ್ಲಿವಕ್ಫ್ ಆಸ್ತಿಎಂದು ನಮೂದಿಸಲಾಗಿದ್ದು, ಇದರಿಂದ ಅವರಿಗೆ ಹೊಸ ಕಂಟಕ ಎದುರಾಗಿದೆ.

ಬಿಜೆಪಿ ಶಾಸಕಿ ಶಶಿಕಲಾ ಜೊಲ್ಲೆ ಮತ್ತು ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ದಂಪತಿಯ ಕಿರಿಯ ಪುತ್ರ ಬಸವಪ್ರಭು ಜೊಲ್ಲೆ ಅವರಿಗೆ ಸೇರಿದ‌ 2 ಎಕರೆ‌ 13 ಗುಂಟೆ ಜಮೀನಿನಪಹಣಿಯಲ್ಲಿ ವಕ್ಫ್ ಆಸ್ತಿ ಅಂತ ಹೆಸರು ಸೇರ್ಪಡೆಯಾಗಿದೆ.

2021ರಲ್ಲಿ ಶಾಸಕಿ ಶಶಿಕಲಾ ಜೊಲ್ಲೆ ವಕ್ಫ್ಬೋರ್ಡ್ಸಚಿವರಾಗಿದ್ದ ಸಮಯದಲ್ಲೇ ತಮ್ಮ ಕಿರಿಯ ಪುತ್ರ ಬಸವಪ್ರಭು ಅವರಿಗೆ ಸೇರಿದ ಜಮೀನು ಪಹಣಿಯಲ್ಲಿ ವಕ್ಫ್ಆಸ್ತಿ ಅಂತ ನಮೂದಾಗಿರುವುದು ತಿಳಿದುಬಂದಿದೆ. ಪಹಣಿ ಪತ್ರ ನೋಡಿ ಬಸವಪ್ರಭು ದಂಗಾಗಿದ್ದಾರೆ.

ಶಶಿಕಲಾ ಜೊಲ್ಲೆ ಅವರು ತಾವು ಸಚಿವೆಯಾಗಿದ್ದ ಸಮಯದಲ್ಲೇ  ತಮ್ಮ ಪುತ್ರನ ಜಮೀನಿನ ಪಹಣಿಯಲ್ಲಿ ವಕ್ಫ್ಆಸ್ತಿ ಅಂತ ನಮೂದು ಆಗಿದ್ದು ವಿಪಾರ್ಯಾಸವಾಗಿದೆ. ಅಲ್ಲದೇ, ಇವರ ಅವಧಿಯಲ್ಲಿ ಅನೇಕ ರೈತರ ಜಮೀನಿನ ಪಹಣಿಯಲ್ಲಿ ವಕ್ಫ್ಆಸ್ತಿ ಅಂತ ನಮೂದು ಮಾಡಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments