Webdunia - Bharat's app for daily news and videos

Install App

ಮಾಜಿ ಸಚಿವ ಶ್ರೀರಂಗದೇವರಾಯಲು ಇನ್ನಿಲ್ಲ

Webdunia
ಬುಧವಾರ, 23 ಆಗಸ್ಟ್ 2023 (08:59 IST)
ಕೊಪ್ಪಳ : ಸರಳ, ಸಜ್ಜನ ರಾಜಕಾರಣಿ, ಕನಕಗಿರಿ ಮತ್ತು ಗಂಗಾವತಿ ವಿಧಾನಸಭೆ ಕ್ಷೇತ್ರದಿಂದ ಸತತ ಐದು ಬಾರಿ ಶಾಸಕರಾಗಿದ್ದ, ಮಾಜಿ ಸಚಿವ ಶ್ರೀರಂಗದೇವರಾಯಲು (85) ಮಂಗಳವಾರ ಸಂಜೆ ನಿಧನರಾಗಿದ್ದಾರೆ.

ಕಳೆದ ಕೆಲ ದಿನದಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಗಂಗಾವತಿಯ ತಮ್ಮ ನಿವಾಸದಲ್ಲಿ ಇಹಲೋಕ ತ್ಯಜಿಸಿದ್ದಾರೆ. ಮೃತರಿಗೆ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷೆ ಲಲಿತಾರಾಣಿ ಪತ್ನಿ, ಪುತ್ರರಾದ ಉದ್ಯಮಿ ಕೃಷ್ಣದೇವರಾಯ, ವೈದ್ಯ ವಿ.ಎಸ್.ಎನ್.ಡಿ ರಾಯಲು, ಪುತ್ರಿ ಲತಾ ಸೇರಿ ಅಪಾರ ಬಂಧು-ಬಳಗವಿದೆ. ಮೃತರ ಅಂತ್ಯಸಂಸ್ಕಾರವು ಕ್ಷತ್ರೀಯ ವಿಧಿ-ವಿಧಾನಗಳಂತೆ ಗಂಗಾವತಿ ತಾಲೂಕು ಆನೆಗೊಂದಿ ಗ್ರಾಮದಲ್ಲಿ ಬುಧವಾರ (ಆ.23) ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ವಿಜಯನಗರ ಸಾಮ್ರಾಜ್ಯದ ಮೂಲ ರಾಜಧಾನಿಯಾಗಿದ್ದ ಆನೆಗೊಂದಿ ರಾಜವಂಶಕ್ಕೆ ಸೇರಿದವರು. ಅರವೀಡು ರಾಜವಂಶಸ್ಥ ಶ್ರೀರಂಗದವರಾಯಲು ನರಪತಿ ಸಂಸ್ಥಾನಕ್ಕೆ ಸೇರಿದವರು. ಕಳೆದ 1938ರಲ್ಲಿ ತಂದೆ ಶ್ರೀವೆಂಕಟದೇವರಾಯಲು- ತಾಯಿ ಶ್ರೀಲಕ್ಷ್ಮಿದೇವಮ್ಮರ ಮಗನಾಗಿ ಗಂಗಾವತಿ ತಾಲೂಕು ಆನೆಗೊಂದಿ ಗ್ರಾಮದಲ್ಲಿ ಶ್ರೀರಂಗದೇವರಾಯಲು ಜನಿಸಿದ್ದಾರೆ. ತಮ್ಮ ಅಧಿಕಾರವಧಿಯಲ್ಲಿ ಸಾಕಷ್ಟು ಜನಪರ ಯೋಜನೆ ಕ್ಷೇತ್ರಕ್ಕೆ ತಂದ ಶ್ರೇಯಸ್ಸು ರಂಗದೇವರಾಯಲು ಅವರಿಗೆ ಸೇರುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಆರಾಮಾಗಿ ನಡೆದುಕೊಂಡು ಹೋಗುತ್ತಿರುವಾಗಲೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸೂಸೈಡ್‌, ಭಯಾನಕ ವಿಡಿಯೋ

ಅಕ್ಟೋಬರ್‌ನಲ್ಲಿ ಸಿಎಂ ಬದಲಾವಣೆ ಪಕ್ಕಾ, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments