Webdunia - Bharat's app for daily news and videos

Install App

ಮಾಜಿ ಸಚಿವ ವಿಜಯ್ ಶಂಕರ್ ಬಿಜೆಪಿಗೆ ಗುಡ್‌ಬೈ?

Webdunia
ಗುರುವಾರ, 5 ಅಕ್ಟೋಬರ್ 2017 (16:56 IST)
ಬಿಜೆಪಿ ಮುಖಂಡ ಮಾಜಿ ಸಂಸದ, ಮಾಜಿ ಅರಣ್ಯ ಸಚಿವ ವಿಜಯ್ ಶಂಕರ್ ಬಿಜೆಪಿಗೆ ಗುಡ್‌ಬೈ ಹೇಳುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿ ನಾಯಕರ ನಡೆಯಿಂದಾಗಿ ಬೇಸರಗೊಂಡಿರುವ ವಿಜಯ್ ಶಂಕರ್, ಬಿಜೆಪಿಗೆ ಗುಡ್‌ಬೈ ಹೇಳಿದಲ್ಲಿ ಮೈಸೂರು ಜಿಲ್ಲೆಯಲ್ಲಿ ಬಿಜೆಪಿಗೆ ಭಾರಿ ಹೊಡೆತ ಬೀಳಲಿದೆ ಎನ್ನಲಾಗುತ್ತಿದೆ.
 
ಬಿಜೆಪಿ ಮುಖಂಡ ವಿಜಯ್ ಶಂಕರ್, ಕಾಂಗ್ರೆಸ್ ಪಕ್ಷ ಸೇರುವ ಸಾಧ್ಯತೆಗಳು ದಟ್ಟವಾಗಿವೆ ಎನ್ನಲಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಒಂದು ವೇಳೆ, ವಿಜಯ್ ಶಂಕರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮುಖಂಡ ಎಚ್.ವಿಶ್ವನಾಥ್ ವಿರುದ್ಧ ಸ್ಪರ್ಧಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.
 
ಕಳೆದ 2014 ರ ಲೋಕಸಭೆ ಚುನಾವಣೆಯಲ್ಲಿ ವಿಜಯ್ ಶಂಕರ್ ಅವರನ್ನು ಕಡೆಗೆಣಿಸಿದ ಬಿಜೆಪಿ ಹೈಕಮಾಂಡ್, ಮೈಸೂರು ಬದಲಿಗೆ ಹಾಸನ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ನೀಡಿತ್ತು. ವಿಜಯ್ ಶಂಕರ್, ಮಾಜಿ ಪ್ರಧಾನಿ ದೇವೇಗೌಡರ ವಿರುದ್ಧ ಸೋಲನುಭವಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments