ದೇವೇಗೌಡರನ್ನ ಹಾಡಿಹೊಗಳಿದ ಮಾಜಿ ಶಾಸಕ ದತ್ತ..!

Webdunia
ಶುಕ್ರವಾರ, 6 ಜನವರಿ 2023 (16:02 IST)
ಕಳೆದ ಐವತ್ತು ವರ್ಷಗಳಿಂದ ಮಾಜಿ ಪ್ರಧಾನಿ ದೇವೇಗೌಡರು-ನನ್ನದ್ದು ತಂದೆ ಮಕ್ಕಳ ಸಂಬಂಧ. ನಾನೆಲ್ಲೆ ಇದ್ದರೂ ಅವರ ಹಾರೈಕೆ ನನ್ನ ಮೇಲೆ ಇದ್ದೇ ಇರುತ್ತೆ. ನಾನು ಜನವರಿ 15ರ ಬಳಿಕ ಕಾಂಗ್ರೆಸ್ ಪಕ್ಷ ಸೇರುತ್ತೇನೆ ಎಂದು ಮಾಜಿ ಶಾಸಕ ವೈ.ಎಸ್.ವಿ. ದತ್ತ ಹೇಳಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ದತ್ತ ಅವರ ಸ್ವಗ್ರಾಮ ಯಗಟಿಯಲ್ಲಿ ಮಾತನಾಡಿದ ಅವರು, ನನ್ನನ್ನ ವಿಧಾನ ಪರಿಷತ್ ಸದಸ್ಯನನ್ನಾಗಿ ಮಾಡಿದ್ದೇ ದೇವೇಗೌಡರು. ಅದು ನನ್ನ ರಾಜಕೀಯ ಜೀವನಕ್ಕೆ ಸಿಕ್ಕ ತಿರುವು. ಇದೀಗ ಅನಿವಾರ್ಯವಾಗಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ. ಇದನ್ನ ಅವರಿಗೆ ಹೇಳಲು ಒಂದು ರೀತಿ ಮುಜುಗರವಾಗುತ್ತದೆ. ಆದರೆ, ದೇವೇಗೌಡರು ನನ್ನ ಪರಿಸ್ಥಿತಿಯನ್ನ ಅರ್ಥ ಮಾಡಿಕೊಳ್ಳುತ್ತಾರೆ ಎಂಬುದು ನನ್ನ ಭಾವನೆ ಎಂದು ಭಾವುಕರಾದರು. ಕಡೂರಿನಲ್ಲಿ ಜನಗಳ ನಿರಂತರ ಸಂಪರ್ಕದಲ್ಲಿದ್ದೇನೆ. ಕಳೆದ ಒಂದೂವರೆ ವರ್ಷದಿಂದಲೂ ತಾಲ್ಲೂಕಿನಲ್ಲಿ ಎಲ್ಲೇ ಹೋದರೂ ಕಾಂಗ್ರೆಸ್ ಸೇರಬೇಕೆಂಬ ಸಾರ್ವತ್ರಿಕ ಅಭಿಪ್ರಾಯ ವ್ಯಕ್ತವಾಗುತ್ತಿತ್ತು. ಹಾಗಾಗಿ, ಜನಾಭಿಪ್ರಾಯ, ಅಭಿಮಾನಿಗಳು ಹಾಗೂ ಕಾರ್ಯಕರ್ತರ ಅಭಿಪ್ರಾಯದಂತೆ ನನ್ನ ಸಮಾನ ಮನಸ್ಕ ಸ್ನೇಹಿತರಿರುವ ಕಾಂಗ್ರೆಸ್ ಪಕ್ಷ ಸೇರುವ ನಿರ್ಧಾರ ಮಾಡಿದ್ದೇನೆ ಎಂದರು. ಕಾಂಗ್ರೆಸ್ ಪಕ್ಷದಿಂದ ಕರೆ ಬಂದಿದ್ದು, ಜನವರಿ 15ರಂದು ಪಕ್ಷಕ್ಕೆ ಸೇರಲು ಸೂಚಿಸಿದ್ದಾರೆ. ಅಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಕಾಂಗ್ರೆಸ್ ಸೇರುತ್ತೇನೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments