Webdunia - Bharat's app for daily news and videos

Install App

ಸಚಿವ ಶ್ರೀರಾಮುಲು ವಿರುದ್ಧ ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ವಾಗ್ದಾಳಿ

Webdunia
ಶುಕ್ರವಾರ, 10 ಜನವರಿ 2020 (10:43 IST)
ಚಿತ್ರದುರ್ಗ : ಸಚಿವ ಶ್ರೀರಾಮುಲುಗೆ ಸಚಿವ ಸ್ಥಾನವನ್ನು ನಿಭಾಯಿಸಲು ಬರಲ್ಲ.ಕೇವಲ ಬಿಲ್ಡಪ್ ಕೊಡುವುದು ಮಾತ್ರ ರಾಮುಲುಗೆ ಬರುತ್ತೆ ಎಂದು ಸಚಿವ ಶ್ರೀರಾಮುಲು ವಿರುದ್ಧ ಮೊಳಕಾಲ್ಮೂರು ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.



ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ನೇರಲಗುಂಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಳ್ಳಾರಿಯಲ್ಲಿ ಬಿ.ಶ್ರೀರಾಮುಲು ವರ್ಚಸ್ಸು ಬಿದ್ದುಹೋಗಿದೆ. ಹೀಗಾಗಿ ಮೊಳಕಾಲ್ಮೂರಿಗೆ ಹೊಟ್ಟೆಪಾಡಿಗಾಗಿ ಬಂದಿದ್ದಾನೆ. ಶ್ರೀರಾಮುಲು 20 ಆಪ್ತ ಸಹಾಯಕರನ್ನು ಇಟ್ಟುಕೊಂಡಿದ್ದಾರೆ. 20 ಆಪ್ತ ಸಹಾಯಕರು ಹಣ ವಸೂಲಿ ಮಾಡಲು ಇದ್ದಾರೆ. ಕ್ಷೇತ್ರದ ಜನರಿಗೆ ಶ್ರೀರಾಮುಲು ಸಿಗುವುದು ಕಷ್ಟವಾಗಿದೆ’ ಎಂದು ಕಿಡಿಕಾರಿದ್ದಾರೆ.


‘ನಾನು ನಿರ್ಮಿಸಿರುವ ಕಟ್ಟಡಗಳ ಉದ್ಘಾಟನೆಗೆ ಬರುತ್ತಾನೆ.  ಶ್ರೀರಾಮುಲು ಬುಡಬುಡಿಕೆ ಮಾತುಗಳಿಗೆ ಯಾರು ಹೆದರಲ್ಲ. ಸಚಿವ ಶ್ರೀರಾಮುಲು ನಾಯಕರ ನಾಯಕ ಆಗಿದ್ದರೆ  ಹುಣಸೂರಿನಲ್ಲಿ ಹೆಚ್.ವಿಶ್ವನಾಥ್ ಗೆಲ್ಲಿಸಿ ತೋರಿಸಬೇಕಿತ್ತು ಎಂದು ಮೊಳಕಾಲ್ಮೂರು ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments