Select Your Language

Notifications

webdunia
webdunia
webdunia
webdunia

ಮಾಜಿ ಮಂತ್ರಿ ದಿ.ಎಂ.ಪಿ.ಪ್ರಕಾಶ್ ಅವರ ಪುತ್ರಿಗೆ ಕೊಲೆ ಬೆದರಿಕೆ ಹಾಕಿದ ಮಾಜಿ ಶಾಸಕ

ಮಾಜಿ ಮಂತ್ರಿ ದಿ.ಎಂ.ಪಿ.ಪ್ರಕಾಶ್ ಅವರ ಪುತ್ರಿಗೆ ಕೊಲೆ ಬೆದರಿಕೆ ಹಾಕಿದ ಮಾಜಿ ಶಾಸಕ
ಮೈಸೂರು , ಶುಕ್ರವಾರ, 25 ಅಕ್ಟೋಬರ್ 2019 (11:33 IST)
ಮೈಸೂರು : ಮಾಜಿ ಮಂತ್ರಿ ದಿ.ಎಂ.ಪಿ.ಪ್ರಕಾಶ್ ಅವರ ಪುತ್ರಿ ಸುಮಾ ವಿಜಯ್ ಅವರಿಗೆ ಮಾಜಿ ಶಾಸಕ ಹೆಚ್.ಪಿ. ಮಂಜುನಾಥ್ ಅವರು ಕೊಲೆ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ತಿಳಿದುಬಂದಿದೆ.



ತನ್ನ ಸಹೋದರ ಎಂ.ಪಿ. ರವೀಂದ್ರ ಜೊತೆ ಆತ್ಮೀಯರಾಗಿದ್ದ ಮಂಜುನಾಥ್ ಅವರಿಗೆ ರವೀಂದ್ರ ತಾನು ಖರೀದಿಸಿದ ಪೆಂಟ್ ಹೌಸ್ ನಲ್ಲಿ ವಾಸ್ತವ್ಯ ಹೂಡಲು ಅವಕಾಶ ಮಾಡಿಕೊಟ್ಟಿದ್ದಾರೆ. ಆದರೆ ರವೀಂದ್ರ ನಿಧನರಾದ ನಂತರ ಆ ಮನೆಯನ್ನು ಬಿಟ್ಟು ಕೊಡಲು ಸುಮಾ ವಿಜಯ್ ಕೇಳಿದ್ದಕ್ಕೆ ಮಂಜುನಾಥ್ ನಿರಾಕರಿಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಸುಮಾ ಆರೋಪಿಸಿದ್ದಾರೆ.

 

ಈ ಬಗ್ಗೆ ಮಂಜುನಾಥ್ ವಿರುದ್ಧ ಸುಮಾ ಮೈಸೂರಿನ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆದರೆ ಮಂಜುನಾಥ್ ಈ ಆರೋಪವನ್ನು ಅಲ್ಲಗೆಳೆದಿದ್ದು, ರವೀಂದ್ರ ತಮಗೆ ಮನೆ ಮಾರಾಟ ಮಾಡಿದ್ದಾರೆ ಎಂದು ವಾದಿಸಿದ್ದಾರೆ ಎನ್ನಲಾಗಿದೆ.

 

ಮಂಜುನಾಥ್ ಸಿದ್ದರಾಮಯ್ಯ ಅವರ ಆಪ್ತರಾಗಿದ್ದು, ಮುಂಬರುವ ವಿಧಾನಸಭಾ ಉಪಚುನಾವಣೆಯಲ್ಲಿ ಹುಣಸೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಎನ್ನಲಾಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಟಿಪ್ಪು ಜಯಂತಿಯನ್ನು ನಾವೇ ಮುಂದೆ ನಿಂತು ಆಚರಿಸುತ್ತೇವೆ-ಬಿಜೆಪಿ ನಾಯಕ ಶರತ್ ಬಚ್ಚೆಗೌಡ ಹೇಳಿಕೆ