Webdunia - Bharat's app for daily news and videos

Install App

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆಂದು ಅವಾಜ್ ಹಾಕಿದ ಮಾಜಿ ಶಾಸಕ !

Webdunia
ಶನಿವಾರ, 20 ಅಕ್ಟೋಬರ್ 2018 (15:56 IST)
ಪೊಲೀಸ್ ಠಾಣೆಗೆ ತೆರಳಿ ಪೊಲೀಸ್ ಪೇದೆಗಳ ವಿರುದ್ಧ ಮಾಜಿ ಶಾಸಕ ಅವಾಜ್ ಹಾಕಿದ್ದಲ್ಲದೇ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ಘಟನೆ ನಡೆದಿದೆ.

ಯಾದಗಿರಿ ಜಿಲ್ಲೆಯ ಸುರಪುರ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ರಾಜಾವೆಂಕಟಪ್ಪ ನಾಯಕ ಸುರಪುರ ಪೊಲೀಸ್ ಠಾಣೆಗೆ ತೆರಳಿ‌ ಪೊಲೀಸ್ ಪೇದೆಗಳ ವಿರುದ್ಧ ಅವಾಜ್ ಹಾಕಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ ಎನ್ನಲಾಗಿದೆ.

ಅದೇ ರೀತಿ ಪಿಐ ಹರೀಬಾ ಜಮಾದರ್ ಹಾಗೂ ಡಿವೈಎಸ್ಪಿ ಶಿಲವಂತ ಹೊಸಮನಿ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದು, ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆಂದು ಅವಾಜ್ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪಿಐ ಹರೀಬಾ ಜಮಾದರ್ ಭೇಟಿ ವೇಳೆ, ಮಾಜಿ ಶಾಸಕ ರಾಜಾವೆಂಕಟಪ್ಪ ನಾಯಕರಿಂದ ಪಿಐಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಲಾಗಿದೆ.

ಇದಕ್ಕೂ ಮುನ್ನ ಮಾಜಿ ಶಾಸಕ ರಾಜಾವೆಂಕಟಪ್ಪ ನಾಯಕ ಅವರ ಪುತ್ರ ರಾಜಾ ವೇಣುಗೋಪಾಲ ನಾಯಕ  ಸೇರಿ ಸುಮಾರು 10 ಜನ ಠಾಣೆಗೆ ತೆರಳಿ ಪೊಲೀಸರಿಗೆ ನಿಂದನೆ ಮಾಡಿದ್ದರು ಎನ್ನಲಾಗಿದೆ.

ನಂತರ ಮಾಜಿ ಶಾಸಕ ರಾಜಾವೆಂಕಟಪ್ಪ ನಾಯಕ ಠಾಣೆಗೆ ತೆರಳಿ ಅವಾಜ್ ಹಾಕಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.
ಸುರಪುರ ಠಾಣೆ ಮುಖ್ಯ ಪೇದೆ ಶಂಭುರಾವ್ ನಿಂದ ಮಾಜಿ ಶಾಸಕ ರಾಜಾವೆಂಕಟಪ್ಪ ನಾಯಕ‌ ಸೇರಿ 8 ಜನರ ವಿರುದ್ಧ ಸುರಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಗೆ ಗಣ್ಯರ ದಂಡು: ಉಪರಾಷ್ಟ್ರಪತಿ, ರಾಜ್ಯಪಾಲ ಸಿ.ಎಂರಿಂದ ಶುಭಹಾರೈಕೆ

ಮುಂದಿನ ಸುದ್ದಿ
Show comments