ಹಾಲಿ ಶಾಸಕ ಗುತ್ತೇದಾರ್ ವಿರುದ್ಧ ಮಾಜಿ ಶಾಸಕ ವಾಗ್ದಾಳಿ

Webdunia
ಬುಧವಾರ, 26 ಸೆಪ್ಟಂಬರ್ 2018 (19:00 IST)
ಬಿಜೆಪಿಯ ಹಾಲಿ ಶಾಸಕ ಹೈದ್ರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಯೋಜನೆಗಳನ್ನು ಸ್ಥಗಿತಗೊಳಿಸಿದ್ದಾರೆ. ಪ್ರತಿ ಕಾಮಗಾರಿಯಲ್ಲಿ ಶೇ. 5ರಷ್ಟು ಕಮೀಷನ್ ನೀಡಬೇಕೆಂದು ಗುತ್ತಿಗೆದಾರರ ಮೇಲೆ ಒತ್ತಡವಿದೆ ಎಂದು ಕಾಂಗ್ರೆಸ್ ನ ಮಾಜಿ ಶಾಸಕ ಆರೋಪ ಮಾಡಿದ್ದಾರೆ.

ಕಲಬುರಗಿ ಜಿಲ್ಲೆಯ ಆಳಂದ ಮತಕ್ಷೇತ್ರದ ಬಿಜೆಪಿ ಶಾಸಕ ಸುಭಾಷ ಗುತ್ತೇದಾರ ವಿರುದ್ಧ ಕಾಂಗ್ರೆಸ್ ನ ಮಾಜಿ ಶಾಸಕ ಬಿ.ಆರ್.ಪಾಟೀಲ್ ವಾಗ್ದಾಳಿ ಮುಂದುವರಿಸಿದ್ದಾರೆ.

ಆಳಂದ ತಾಲೂಕಿನಲ್ಲಿ ಹೈದ್ರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ 40 ಕೋಟಿ ರೂ. ಕಾಮಗಾರಿಗಳು ಸ್ಥಗಿತವಾಗಿದೆ. ಇದಕ್ಕೆ ಶಾಸಕರೇ ಹೊಣೆಯಾಗಿದ್ದಾರೆ. ಕಾಮಗಾರಿ ಮಾಡಬೇಕೆಂದರೆ ಶಾಸಕರಿಗೆ ಶೇ. 5ರಷ್ಟು ಕಮೀಷನ್ ನೀಡಬೇಕೆಂದು ಅಧಿಕಾರಿಗಳ ಮೇಲೆ ಒತ್ತಡವಿದೆ ಎಂದು ದೂರಿದರು.

ಯಾವೊಂದು ಕಾಮಗಾರಿಗಳು ಕ್ಷೇತ್ರದಲ್ಲಿ ಪ್ರಗತಿಯಲ್ಲಿ ಇಲ್ಲ ಎಂದಿರುವ ಅವರು, ಸೂಕ್ಷ್ಮವಾಗಿ ಪರಿಶೀಲಿಸಿ ಪ್ರಾದೇಶಿಕ ಆಯುಕ್ತರು ನಡೆಸಿದ ಸಭೆಯಲ್ಲಿ ಸುಳ್ಳು ಮಾಹಿತಿ ನೀಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಇಲ್ಲದಿದ್ದರೆ ಆಳಂದದಲ್ಲಿರುವ ಪಿಎಂಜಿಸಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಲಾಗುತ್ತದೆ ಎಂದು ಹೇಳಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏಲ್‌ಪಿಜಿ ದರ ಏರಿಕೆ, ವಿಶ್ವಮಟ್ಟದಲ್ಲಿ ಮಾನ ಕಳೆಯುತ್ತಿರುವ ಮೋದಿ ರಾಜೀನಾಮೆ ನೀಡಲಿ

ಪಶ್ಚಿಮ ಏಷ್ಯಾ ಸಂಘರ್ಷ: ಮಂಗಳೂರಿನಿಂದ ಹೊರಡಬೇಕಿದ್ದ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದಲ್ಲಿ ಬದಲಾವಣೆ

ಭಾರತಕ್ಕೆ ಸ್ಪೆಷಲ್‌ ಧನ್ಯವಾದ ಹೇಳಿದ ಇರಾನ್‌, ಯಾವಾ ಕಾರಣಕ್ಕೆ ಗೊತ್ತಾ

ಟಿ20 ವಿಶ್ವಕಪ್ ಫೈನಲ್‌, ದೆಹಲಿಯಿಂದ ಅಹಮದಾಬಾದ್‌ಗೆ ವಿಶೇಷ ರೈಲು

ಹೌ ಟು ಕಮಿಟ್ ಸೂಸೈಡ್ ಎಂದು ಸರ್ಚ್‌ ಮಾಡಿದ ವಿದ್ಯಾರ್ಥಿನಿಯರಿಬ್ಬರು ಶೌಚಾಲಯದಲ್ಲಿ ಶವವಾಗಿ ಪತ್ತೆ

ಮುಂದಿನ ಸುದ್ದಿ
Show comments