Webdunia - Bharat's app for daily news and videos

Install App

ಹಾಲಿ ಶಾಸಕ ಗುತ್ತೇದಾರ್ ವಿರುದ್ಧ ಮಾಜಿ ಶಾಸಕ ವಾಗ್ದಾಳಿ

Webdunia
ಬುಧವಾರ, 26 ಸೆಪ್ಟಂಬರ್ 2018 (19:00 IST)
ಬಿಜೆಪಿಯ ಹಾಲಿ ಶಾಸಕ ಹೈದ್ರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಯೋಜನೆಗಳನ್ನು ಸ್ಥಗಿತಗೊಳಿಸಿದ್ದಾರೆ. ಪ್ರತಿ ಕಾಮಗಾರಿಯಲ್ಲಿ ಶೇ. 5ರಷ್ಟು ಕಮೀಷನ್ ನೀಡಬೇಕೆಂದು ಗುತ್ತಿಗೆದಾರರ ಮೇಲೆ ಒತ್ತಡವಿದೆ ಎಂದು ಕಾಂಗ್ರೆಸ್ ನ ಮಾಜಿ ಶಾಸಕ ಆರೋಪ ಮಾಡಿದ್ದಾರೆ.

ಕಲಬುರಗಿ ಜಿಲ್ಲೆಯ ಆಳಂದ ಮತಕ್ಷೇತ್ರದ ಬಿಜೆಪಿ ಶಾಸಕ ಸುಭಾಷ ಗುತ್ತೇದಾರ ವಿರುದ್ಧ ಕಾಂಗ್ರೆಸ್ ನ ಮಾಜಿ ಶಾಸಕ ಬಿ.ಆರ್.ಪಾಟೀಲ್ ವಾಗ್ದಾಳಿ ಮುಂದುವರಿಸಿದ್ದಾರೆ.

ಆಳಂದ ತಾಲೂಕಿನಲ್ಲಿ ಹೈದ್ರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ 40 ಕೋಟಿ ರೂ. ಕಾಮಗಾರಿಗಳು ಸ್ಥಗಿತವಾಗಿದೆ. ಇದಕ್ಕೆ ಶಾಸಕರೇ ಹೊಣೆಯಾಗಿದ್ದಾರೆ. ಕಾಮಗಾರಿ ಮಾಡಬೇಕೆಂದರೆ ಶಾಸಕರಿಗೆ ಶೇ. 5ರಷ್ಟು ಕಮೀಷನ್ ನೀಡಬೇಕೆಂದು ಅಧಿಕಾರಿಗಳ ಮೇಲೆ ಒತ್ತಡವಿದೆ ಎಂದು ದೂರಿದರು.

ಯಾವೊಂದು ಕಾಮಗಾರಿಗಳು ಕ್ಷೇತ್ರದಲ್ಲಿ ಪ್ರಗತಿಯಲ್ಲಿ ಇಲ್ಲ ಎಂದಿರುವ ಅವರು, ಸೂಕ್ಷ್ಮವಾಗಿ ಪರಿಶೀಲಿಸಿ ಪ್ರಾದೇಶಿಕ ಆಯುಕ್ತರು ನಡೆಸಿದ ಸಭೆಯಲ್ಲಿ ಸುಳ್ಳು ಮಾಹಿತಿ ನೀಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಇಲ್ಲದಿದ್ದರೆ ಆಳಂದದಲ್ಲಿರುವ ಪಿಎಂಜಿಸಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಲಾಗುತ್ತದೆ ಎಂದು ಹೇಳಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments