Webdunia - Bharat's app for daily news and videos

Install App

ಬಿಜೆಪಿಗೆ ಗುಡ್‌ಬೈ ಹೇಳಿದ ಮಾಜಿ ಸಂಸದ, ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

Webdunia
ಶನಿವಾರ, 28 ಅಕ್ಟೋಬರ್ 2017 (12:45 IST)
ಬಿಜೆಪಿ ಪಕ್ಷದ ಹಿರಿಯ ನಾಯಕರ ನಿರ್ಲಕ್ಷ್ಯಧೋರಣೆಯಿಂದ ಬೇಸತ್ತು ಮಾಜಿ ಸಂಸದ ಸಿ.ಎಚ್.ವಿಜಯ್ ಶಂಕರ್ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
  
ಮಾಜಿ ಸಂಸದ ವಿಜಯ್ ಶಂಕರ್ ತಮ್ಮ ರಾಜೀನಾಮೆ ಪತ್ರವನ್ನು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ರವಾನಿಸಿದ್ದಾರೆ ಎನ್ನಲಾಗಿದೆ. 
 
ಮಾಜಿ ಸಂಸದ, ಮಾಜಿ ಸಚಿವ ವಿಜಯ್ ಶಂಕರ್ ಮೈಸೂರು ಲೋಕಸಭೆ ಕ್ಷೇತ್ರದಿಂದ ಎರಡು ಬಾರಿ ಜಯಗಳಿಸಿ ಸಂಸದರಾಗಿದ್ದರು. ಆದರೆ, ಕಳೆದ ಲೋಕಸಭೆ ಚುನಾವಣೆಯಲ್ಲಿ ಮೈಸೂರು ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನೀಡಲು ಬಿಜೆಪಿ ನಿರಾಕರಿಸಿ, ಹಾಸನದಿಂದ ಸ್ಪರ್ಧಿಸಲು ಟಿಕೆಟ್ ನೀಡಲಾಗಿತ್ತು. ಚುನಾವಣೆಯಲ್ಲಿ ಎದುರಾಳಿ ದೇವೇಗೌಡರ ಎದುರು ಪರಾಭವಗೊಂಡಿದ್ದರು. 
 
ರಾಜ್ಯ ಬಿಜೆಪಿ ರೈತ ಮೋರ್ಚಾದ ರಾಜ್ಯಾಧ್ಯಕ್ಷರಾಗಿರುವ ವಿಜಯ್ ಶಂಕರ್ ತಮ್ಮ ಕ್ಷೇತ್ರದಲ್ಲಿ ಫ್ರಭಾವಿ ನಾಯಕರಾಗಿ ಸೇವೆ ಸಲ್ಲಿಸಿದ್ದಾರೆ. ಆದರೆ, ನಿರಂತರವಾಗಿ ಹಿರಿಯ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಪಕ್ಷಕ್ಕೆ ಗುಡ್‌ಬೈ ಹೇಳಿದ್ದಾರೆ ಎಂದು ಅವರ ಬೆಂಬಲಿಗರು ತಿಳಿಸಿದ್ದಾರೆ.
 
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ವದಂತಿಗಳು ಕೇಳಿಬರುತ್ತಿವೆ. ಆದರೆ. ವಿಜಯ್ ಶಂಕರ್ ತಾವು ಯಾವ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎನ್ನುವ ಬಗ್ಗೆ ಬಹಿರಂಗ ಹೇಳಿಕೆ ನೀಡಿಲ್ಲ. ವಿಜಯ್ ಶಂಕರ್‌ ಅವರಿಗೆ ಜೆಡಿಎಸ್, ಕಾಂಗ್ರೆಸ್ ಎರಡೂ ಪಕ್ಷಗಳು ಆಹ್ವಾನ ನೀಡಿವೆ ಎನ್ನುವ ವರದಿಗಳು ಹರಡಿವೆ,. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments