Webdunia - Bharat's app for daily news and videos

Install App

ಕಾಂಗ್ರೆಸ್‌ ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿ ಮಾಜಿ ಸಂಸದೆ ರಮ್ಯಾಗಿಲ್ಲ ಸ್ಥಾನ

Webdunia
ಭಾನುವಾರ, 31 ಮಾರ್ಚ್ 2019 (10:46 IST)
ಬೆಂಗಳೂರು : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಚುನಾವಣಾ ಪ್ರಚಾರಕ್ಕಾಗಿ ಕಾಂಗ್ರೆಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ್ದು, ಇದರಲ್ಲಿ ಮಾಜಿ ಸಂಸದೆ ಕಾಂಗ್ರೆಸ್​ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ರಮ್ಯಾ ಅವರಿಗೆ ಸ್ಥಾನವನ್ನು ನೀಡಲಾಗಿಲ್ಲ.


ಕಾಂಗ್ರೆಸ್ ನಿಂದ 40 ಮಂದಿ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್‌, ಲೋಕಸಭೆ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ್‌, ಎಚ್‌.ಕೆ.ಪಾಟೀಲ್‌, ರಾಮಲಿಂಗಾರೆಡ್ಡಿ, ಡಾ. ಜಯಮಾಲಾ, ಉಮಾಶ್ರೀ, ಸಿ.ಎಂ.ಇಬ್ರಾಹಿಂ, ಗುಲಾಮ್‌ ನಬಿ ಆಜಾದ್‌, ಪೃಥ್ವಿರಾಜ್‌ ಚವಾಣ್‌, ಸಚಿನ್‌ ಪೈಲಟ್‌, ಸಲೀಮ್‌ ಅಹಮದ್‌, ಆರ್‌.ವಿ. ದೇಶಪಾಂಡೆ, ಎಂ.ಬಿ. ಪಾಟೀಲ್‌, ಕೆ.ಜೆ. ಜಾರ್ಜ್‌, ಸತೀಶ್‌ ಜಾರಕಿಹೊಳಿ, ಕೃಷ್ಣ ಬೈರೇಗೌಡ, ಜಮೀರ್‌ ಅಹ್ಮದ್‌ ಖಾನ್‌, ಆರ್‌.ಬಿ.ತಿಮ್ಮಾಪುರ, ಪಿ.ಟಿ. ಪರಮೇಶ್ವರ ನಾಯ್ಕ್‌, ಕೆ. ರೆಹಮಾನ್‌ ಖಾನ್‌, ಕೆ.ಎಚ್‌. ಮುನಿಯಪ್ಪ, ಡಾ.ಶರಣಪ್ರಕಾಶ್‌ ಪಾಟೀಲ್‌, ಎಚ್‌.ಎಂ. ರೇವಣ್ಣ, ಮೋಟಮ್ಮ, ಮುಖ್ಯಮಂತ್ರಿ ಚಂದ್ರು, ರೋಷನ್‌ ಬೇಗ್‌, ಡಾ. ಎಚ್‌.ಸಿ. ಮಹದೇವಪ್ಪ, ಡಾ. ಎಲ್‌. ಹನುಮಂತಯ್ಯ, ವಿ.ಆರ್‌. ಸುದರ್ಶನ್‌ ಮತ್ತು ಐವಾನ್‌ ಡಿಸೋಜಾ ಅವರು ಸ್ಥಾನ ಪಡೆದುಕೊಂಡಿದ್ದಾರೆ.


ಆದರೆ ರಾಜ್ಯದಲ್ಲಿ ಪ್ರಚಾರ ನಡೆಸಲಿರುವ ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಮಾಜಿ ಸಂಸದೆ, ಎಐಸಿಸಿ ಸೋಷಿಯಲ್ ಮೀಡಿಯಾ ಮುಖ್ಯಸ್ಥೆ ರಮ್ಯಾ ಅವರಿಗೆ ಸ್ಥಾನ ನೀಡದೆ ಅವರನ್ನು ಕಡೆಗಣಿಸಲಾಗಿದೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments