Publish Date: Thu, 11 Oct 2018 (18:22 IST)
Updated Date: Thu, 11 Oct 2018 (18:24 IST)
ಉಪಚುನಾವಣೆಯಲ್ಲಿ ಎಂಪಿ ಟಿಕೆಟ್ ನನಗೆ ಸಿಕ್ಕರೆ ಜಿಲ್ಲೆಯ ಮಗಳಾಗಿ ಕೆಲಸ ಮಾಡ್ತೇನೆ ಎಂದು ಮಾಜಿ ಸಂಸದೆ ಹೇಳಿದ್ದಾರೆ.
ಬಳ್ಳಾರಿಯಲ್ಲಿ ನನಗೆ ಟಿಕೆಟ್ ಸಿಕ್ಕರೆ ಬಳ್ಳಾರಿಯ ಮನೆ ಮಗಳಾಗಿ ಕೆಲಸ ಮಾಡುತ್ತೇನೆ ಎಂದು ಜೆ.ಶಾಂತಾ ಹೇಳಿದ್ದಾರೆ. ಆದ್ರೆ, ಯಾರಿಗೆ ಟಿಕೆಟ್ ಕೊಟ್ಟರೂ ನಮ್ಮ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುತ್ತೇನೆ ಎಂದು ಶ್ರೀರಾಮುಲು ಸಹೋದರಿ, ಮಾಜಿ ಸಂಸದೆ ಜೆ. ಶಾಂತಾ ಹೇಳಿದ್ದಾರೆ.
ಬಳ್ಳಾರಿಯಲ್ಲಿ ನಡೆಯುತ್ತಿರುವ ಮಗಳ ಮದುವೆ ಸಮಾರಂಭದ ವೇಳೆ ಮಾತನಾಡಿದ ಅವರು, ಪಕ್ಷದ ವರಿಷ್ಠರ ಹೇಳಿಕೆಗೆ ನಾನು ಬದ್ಧಳಾಗಿದ್ದೇನೆ. ನಾವು ಸೈನಿಕರಿದ್ದಂತೆ. ಪಕ್ಷ ಸೂಚಿಸಿದಂತೆ ನಡೆಯುತ್ತೇವೆ. ಸೈನಿಕರಂತೆಯೇ ಚುನಾವಣೆಗೆ ಸಿದ್ಧರಾಗುತ್ತೇವೆ. ಯಾರೇ ಅಭ್ಯರ್ಥಿಯಾದರೂ, ಸೈನಿಕರಂತೆ ಹೋರಾಟ ಮಾಡ್ತೇವೆ ಎಂದು ಹೇಳಿದರು.