Webdunia - Bharat's app for daily news and videos

Install App

ಸಿಎಂ ಮನೆಮುಂದೆ ಧರಣಿ ನಡೆಸುವ ಎಚ್ಚರಿಕೆ ನೀಡಿದ ದೇವೇಗೌಡರು

Webdunia
ಶನಿವಾರ, 25 ಫೆಬ್ರವರಿ 2017 (13:47 IST)
ಕೆಆರ್ಎಸ್`ಗೆ ಹೇಮಾವತಿ ಡ್ಯಾಂ ನೀರು ಬಿಡುಗಡೆ ವಿರೋಧಿಸಿ ಹಾಸನ ಬಂದ್`ಗೆ ಜೆಡಿಎಸ್ ಸೇರಿ ವಿವಿಧ ಸಂಘಟನೆಗಳು ಬಂದ್`ಗೆ ಕರೆ ನೀಡಿವೆ. ಬಂದ್ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದ್ದು,  ಡಿಸಿ ಕಚೇರಿ ಎದುರು ಪ್ರತಿಭಟನೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಭಾಗವಹಿಸಿದ್ದಾರೆ.


ನಮ್ಮಲ್ಲೇ ನೀರಿನ ಕೊರತೆ ಇದೆ ಅಂತಹುದರಲ್ಲಿ ನಮ್ಮ  ಭಾವನೆಗಳಿಗೆ ಬೆಲೆ ಕೊಡದೇ ಕೆಆರ್ಎಸ್`ಗೆ ನೀರು ಬಿಡುಗಡೆ ಮಾಡುತ್ತಿರುವುದು ಸರಿಯಲ್ಲ ಎಂಬುದು ಜನರ ಆಕ್ರೋಶವಾಗಿದೆ.

ಪ್ರತಿಭಟನೆ ವೇಳೆ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ದೇವೇಗೌಡರು, ನಾನು ತಾಳ್ಮೆ ಕಳೆದುಕೊಂಡಿದ್ದೇನೆ. ಕೂಡಲೇ ಹೇಮಾವತಿಯಿಂದ ಕೆಆರ್`ಎಸ್`ಗೆ ನೀರು ಬಿಡುಗಡೆ ನಿಲ್ಲಿಸಬೇಕು. ಇಲ್ಲವಾದರೆ ಸಿಎಂ ಮನೆಮುಂದೆ ಪ್ರತಿಭಟನೆ ನಡೆಸುವುದಾಗಿ ದೇವೇಗೌಡರು ಎಚ್ಚರಿಕೆ ನೀಡಿದರು. ಯಗಚಿ ಡ್ಯಾಂನಿಂದ ಹಾಸನಕಕೆ ನೀರು ಕೊಡದಿರುವ ಬಗ್ಗೆ ಸಿಎಂ ಅವರನ್ನ ತರಾಟೆಗೆ ತೆಗೆದುಕೊಂಡ ದೇವೇಗೌಡರು, ಸಿಎಂ ಸಿದ್ದರಾಮಯ್ಯಗೆ ನಾಚಿಕೆ ಆಗಬೇಕು, ಕುಡಿಯುವ ನೀರಿಗೂ ಭಿಕ್ಷೆ ಬೇಡಬೇಕಾ? ಎಂದು ವಾಗ್ದಾಳಿ ನಡೆಸಿದರು.

 

ನಮ್ಮಲ್ಲೇ ನೀರಿನ ಕೊರತೆ ಇದ್ದು ಸ್

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments